Categories: crime news

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ವೈರಲ್: ತೀರ್ಥಹಳ್ಳಿಯ ಓರ್ವ ಸೇರಿದಂತೆ ಮೂವರು ಅರೆಸ್ಟ್

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ವೈರಲ್: ತೀರ್ಥಹಳ್ಳಿಯ ಓರ್ವ ಸೇರಿದಂತೆ ಮೂವರು ಅರೆಸ್ಟ್

Bengaluru Cyber Command Police arrested three educated professionals, including a software engineer, for creating and circulating obscene deepfake photos and videos of actress Rukmini Vasanth using AI technology.

ಬೆಂಗಳೂರು, ಜೂನ್ 21: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲ ಡೀಪ್‌ಫೇಕ್ (Deepfake) ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಮೂವರು ಸೈಬರ್ ಅಪರಾಧಿಗಳನ್ನು ಬೆಂಗಳೂರಿನ ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಾಗಲಕೋಟೆಯ ರವಿಕುಮಾರ್ (24), ಬೆಂಗಳೂರಿನ ರಂಜಿತ್ ಕುಮಾರ್ (25) ಹಾಗೂ ತೀರ್ಥಹಳ್ಳಿ ಮೂಲದ ಚಂದ್ರಕಾಂತ್ (33) ಎಂದು ಗುರುತಿಸಲಾಗಿದೆ. ಆರೋಪಿಗಳ ಹಿನ್ನೆಲೆ ಪರಿಶೀಲಿಸಿದ ವೇಳೆ ಅವರು ಸುಶಿಕ್ಷಿತರು ಹಾಗೂ ಸಮಾಜದಲ್ಲಿ ಉತ್ತಮ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಪೊಲೀಸರನ್ನೇ ಅಚ್ಚರಿಗೊಳಿಸಿದೆ.

ಮೊದಲ ಆರೋಪಿ ರವಿಕುಮಾರ್ ಬಿಎಸ್‌ಸಿ ನರ್ಸಿಂಗ್ ಪದವೀಧರನಾಗಿದ್ದು, ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದನು. ಇತ್ತೀಚೆಗೆ ಯೂಟ್ಯೂಬ್ ಮೂಲಕ ಮೊದಲ ಆದಾಯ ಪಡೆದಿದ್ದ ಆತ, ಹೆಚ್ಚಿನ ವೀಕ್ಷಣೆ ಮತ್ತು ವೇಗವಾಗಿ ಹಣ ಗಳಿಸುವ ಉದ್ದೇಶದಿಂದ ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಅಪ್‌ಲೋಡ್ ಮಾಡಲು ಆರಂಭಿಸಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಎರಡನೇ ಆರೋಪಿ ರಂಜಿತ್ ಕುಮಾರ್ ವಾರ್ಷಿಕ ಸುಮಾರು ₹20 ಲಕ್ಷ ಸಂಬಳ ಪಡೆಯುವ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾನೆ. ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿದ್ದ ಆತ ಕೇವಲ ಮನರಂಜನೆ ಮತ್ತು ಕುತೂಹಲಕ್ಕಾಗಿ ಪ್ರಮುಖ ನಟಿಯರ ಎಐ ಆಧಾರಿತ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸುತ್ತಿದ್ದುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

ಮೂರನೇ ಆರೋಪಿ ಚಂದ್ರಕಾಂತ್ ಬೆಂಗಳೂರಿನ ಪ್ರತಿಷ್ಠಿತ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದು, ಉತ್ತಮ ಸಂಬಳ ಪಡೆಯುತ್ತಿದ್ದರೂ ವಿಕೃತ ಮನೋಭಾವದಿಂದ ನಟಿಯರ ಚಿತ್ರಗಳನ್ನು ಡೀಪ್‌ಫೇಕ್ ಮಾಡುತ್ತಿದ್ದನು ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ ಮೂರು ಹೈ-ಎಂಡ್ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಐ ಆಧಾರಿತ ಆ್ಯಪ್‌ಗಳು ಹಾಗೂ ಸಾಫ್ಟ್‌ವೇರ್‌ಗಳ ಮೂಲಕ ನಟಿಯರ ಮುಖಗಳನ್ನು ಅಶ್ಲೀಲ ವಿಡಿಯೋಗಳಿಗೆ ಅಳವಡಿಸಿ ನಕಲಿ ವಿಷಯಗಳನ್ನು ಸೃಷ್ಟಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಸೈಬರ್ ಕಮಾಂಡ್ ಪೊಲೀಸರು ತಮ್ಮ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸುಶಿಕ್ಷಿತ ವ್ಯಕ್ತಿಗಳೇ ಇಂತಹ ಸೈಬರ್ ಅಪರಾಧಗಳಲ್ಲಿ ತೊಡಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

15 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

15 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

15 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

18 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

21 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

22 hours ago