ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಮುಡಿಗೇರಿಸಿಕೊಂಡ ರಿಪ್ಪನ್ಪೇಟೆಯ ಪ್ರತಿಭೆ ಸಚಿನ್ ಎನ್.ಜೆ!
Kuvempu University has awarded a PhD in Journalism and Mass Communication to Sachin N.J., a resident of Ripponpet, Shivamogga, for his research on Kannada cinema.
ಶಿವಮೊಗ್ಗ: ಜಿಲ್ಲೆಯ ರಿಪ್ಪನ್ಪೇಟೆಯ ಯುವಕ ಸಚಿನ್ ಎನ್.ಜೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದು, ಕುವೆಂಪು ವಿಶ್ವವಿದ್ಯಾಲಯವು ಇವರಿಗೆ ಪಿಎಚ್.ಡಿ ಪದವಿಯನ್ನು ಅಧಿಕೃತವಾಗಿ ಘೋಷಿಸಿದೆ. ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನಡೆಸಿದ ಮಹತ್ವದ ಸಂಶೋಧನೆಗಾಗಿ ಈ ಗೌರವ ಒಲಿದುಬಂದಿದೆ.
ರಿಪ್ಪನ್ಪೇಟೆಯ ಯುವಕನ ಸಾಧನೆ:
ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮದವರಾದ ಸಚಿನ್ ಎನ್.ಜೆ, ರಿಪ್ಪನ್ಪೇಟೆಯೊಂದಿಗೆ ದಶಕಗಳ ಅವಿನಾಭಾವ ಸಂಬಂಧ ಹೊಂದಿದ್ದಾರೆ. ತಂದೆ ಜಯಪ್ಪ ಹಾಗೂ ತಾಯಿ ಸುಜಾತ ದಂಪತಿಯ ಸುಪುತ್ರರಾದ ಸಚಿನ್, ತಮ್ಮ ಪ್ರಾಥಮಿಕ ಶಿಕ್ಷಣವನ್ನು ರಿಪ್ಪನ್ಪೇಟೆಯ ಚಂದಳ್ಳಿಯಲ್ಲಿ ಪೂರೈಸಿದ್ದಾರೆ. ಅಷ್ಟೇ ಅಲ್ಲದೆ, ಪ್ರೌಢಶಾಲೆ ಮತ್ತು ಕಾಲೇಜು ಶಿಕ್ಷಣವನ್ನೂ ರಿಪ್ಪನ್ಪೇಟೆಯಲ್ಲಿಯೇ ಮುಗಿಸುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ನಂತರ ಕುವೆಂಪು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸಂಶೋಧನೆಗೆ ಹೆಜ್ಜೆಯಿಟ್ಟಿದ್ದರು.
ಸಂಶೋಧನಾ ವಿಷಯ:
ಕುವೆಂಪು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಚಿನ್ ಅವರು ಅಧ್ಯಯನ ನಡೆಸಿದ್ದರು. “ಅಭಿವೃದ್ಧಿ ಸಂವಹನದ ಮಾಧ್ಯಮವಾಗಿ ಚಲನಚಿತ್ರ: ಆಯ್ದ ಕನ್ನಡ ಚಲನಚಿತ್ರಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ” (Development Communication through Cinema: An Analytical Study of Selected Kannada Movies) ಎಂಬ ಪ್ರಬಂಧವನ್ನು ಮಂಡಿಸಿ, ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಕನ್ನಡ ಚಿತ್ರರಂಗ ಸಮಾಜದಲ್ಲಿ ಹೇಗೆ ಜಾಗೃತಿ ಮೂಡಿಸಿದೆ ಎಂಬುದನ್ನು ಇವರ ಸಂಶೋಧನೆ ಒಳಗೊಂಡಿದೆ.
ಪ್ರಸ್ತುತ ಡಾ. ಸಚಿನ್ ಎನ್.ಜೆ ಅವರು ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ (ಸ್ವಾಯತ್ತ) ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಗ್ರಾಮೀಣ ಹಿನ್ನೆಲೆಯಿಂದ ಬಂದು ಅತ್ಯುನ್ನತ ಪದವಿ ಪಡೆದ ರಿಪ್ಪನ್ಪೇಟೆಯ ಯುವ ಸಾಧಕನಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ವತಿಯಿಂದ ಅಭಿನಂದನೆಗಳು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…