ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಮುಡಿಗೇರಿಸಿಕೊಂಡ ರಿಪ್ಪನ್ಪೇಟೆಯ ಪ್ರತಿಭೆ ಸಚಿನ್ ಎನ್.ಜೆ!
Kuvempu University has awarded a PhD in Journalism and Mass Communication to Sachin N.J., a resident of Ripponpet, Shivamogga, for his research on Kannada cinema.
ಶಿವಮೊಗ್ಗ: ಜಿಲ್ಲೆಯ ರಿಪ್ಪನ್ಪೇಟೆಯ ಯುವಕ ಸಚಿನ್ ಎನ್.ಜೆ ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದು, ಕುವೆಂಪು ವಿಶ್ವವಿದ್ಯಾಲಯವು ಇವರಿಗೆ ಪಿಎಚ್.ಡಿ ಪದವಿಯನ್ನು ಅಧಿಕೃತವಾಗಿ ಘೋಷಿಸಿದೆ. ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನಡೆಸಿದ ಮಹತ್ವದ ಸಂಶೋಧನೆಗಾಗಿ ಈ ಗೌರವ ಒಲಿದುಬಂದಿದೆ.
ರಿಪ್ಪನ್ಪೇಟೆಯ ಯುವಕನ ಸಾಧನೆ:
ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮದವರಾದ ಸಚಿನ್ ಎನ್.ಜೆ, ರಿಪ್ಪನ್ಪೇಟೆಯೊಂದಿಗೆ ದಶಕಗಳ ಅವಿನಾಭಾವ ಸಂಬಂಧ ಹೊಂದಿದ್ದಾರೆ. ತಂದೆ ಜಯಪ್ಪ ಹಾಗೂ ತಾಯಿ ಸುಜಾತ ದಂಪತಿಯ ಸುಪುತ್ರರಾದ ಸಚಿನ್, ತಮ್ಮ ಪ್ರಾಥಮಿಕ ಶಿಕ್ಷಣವನ್ನು ರಿಪ್ಪನ್ಪೇಟೆಯ ಚಂದಳ್ಳಿಯಲ್ಲಿ ಪೂರೈಸಿದ್ದಾರೆ. ಅಷ್ಟೇ ಅಲ್ಲದೆ, ಪ್ರೌಢಶಾಲೆ ಮತ್ತು ಕಾಲೇಜು ಶಿಕ್ಷಣವನ್ನೂ ರಿಪ್ಪನ್ಪೇಟೆಯಲ್ಲಿಯೇ ಮುಗಿಸುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ನಂತರ ಕುವೆಂಪು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸಂಶೋಧನೆಗೆ ಹೆಜ್ಜೆಯಿಟ್ಟಿದ್ದರು.
ಸಂಶೋಧನಾ ವಿಷಯ:
ಕುವೆಂಪು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಚಿನ್ ಅವರು ಅಧ್ಯಯನ ನಡೆಸಿದ್ದರು. “ಅಭಿವೃದ್ಧಿ ಸಂವಹನದ ಮಾಧ್ಯಮವಾಗಿ ಚಲನಚಿತ್ರ: ಆಯ್ದ ಕನ್ನಡ ಚಲನಚಿತ್ರಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ” (Development Communication through Cinema: An Analytical Study of Selected Kannada Movies) ಎಂಬ ಪ್ರಬಂಧವನ್ನು ಮಂಡಿಸಿ, ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಕನ್ನಡ ಚಿತ್ರರಂಗ ಸಮಾಜದಲ್ಲಿ ಹೇಗೆ ಜಾಗೃತಿ ಮೂಡಿಸಿದೆ ಎಂಬುದನ್ನು ಇವರ ಸಂಶೋಧನೆ ಒಳಗೊಂಡಿದೆ.
ಪ್ರಸ್ತುತ ಡಾ. ಸಚಿನ್ ಎನ್.ಜೆ ಅವರು ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ (ಸ್ವಾಯತ್ತ) ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಗ್ರಾಮೀಣ ಹಿನ್ನೆಲೆಯಿಂದ ಬಂದು ಅತ್ಯುನ್ನತ ಪದವಿ ಪಡೆದ ರಿಪ್ಪನ್ಪೇಟೆಯ ಯುವ ಸಾಧಕನಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ವತಿಯಿಂದ ಅಭಿನಂದನೆಗಳು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…