ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ
Shivamogga Wildlife Division has invited applications for one Veterinary Doctor on a contract basis for Sakrebailu Elephant Camp and wildlife rescue operations. Eligible candidates can apply before July 2, 2026.
ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಸಕ್ರೆಬೈಲು ಆನೆ ಬಿಡಾರ ಹಾಗೂ ವನ್ಯಜೀವಿ ರಕ್ಷಣಾ ಕಾರ್ಯಗಳಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ಒಬ್ಬ ಪಶುವೈದ್ಯರನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾಗುವ ಪಶುವೈದ್ಯರು ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವುದರ ಜೊತೆಗೆ, ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ಮೃತಪಟ್ಟ ವನ್ಯಪ್ರಾಣಿಗಳ ಮರಣೋತ್ತರ ಪರೀಕ್ಷೆ, ವನ್ಯಜೀವಿ-ಮಾನವ ಸಂಘರ್ಷದ ಸಂದರ್ಭಗಳಲ್ಲಿ ತುರ್ತು ಚಿಕಿತ್ಸಾ ಮತ್ತು ರಕ್ಷಣಾ ಕಾರ್ಯಗಳು, ವನ್ಯಪ್ರಾಣಿಗಳ ಸ್ಥಳಾಂತರ ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗುತ್ತದೆ.
ಅಭ್ಯರ್ಥಿಗಳು Bachelor of Veterinary Science & Animal Husbandry (B.V.Sc & A.H.) ಪದವಿಯನ್ನು ಹೊಂದಿರಬೇಕು. ಜೊತೆಗೆ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ವನ್ಯಜೀವಿ ಅಥವಾ ಮೃಗಾಲಯ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ ಪಡೆದಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರಗಳೊಂದಿಗೆ ಅಗತ್ಯ ದಾಖಲೆಗಳನ್ನು ಜುಲೈ 2, 2026ರೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಶಿವಮೊಗ್ಗದ ವನ್ಯಜೀವಿ ವಿಭಾಗದ ಕಚೇರಿಗೆ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳಿಗಾಗಿ ಜುಲೈ 6, 2026ರಂದು ನೇರ ಸಂದರ್ಶನ ನಡೆಯಲಿದೆ ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಕ್ರೆಬೈಲು ಆನೆ ಬಿಡಾರ ವೆಬ್ಸೈಟ್ ಅಥವಾ ಶಿವಮೊಗ್ಗ ವನ್ಯಜೀವಿ ವಿಭಾಗದ ಕಚೇರಿಯನ್ನು ಸಂಪರ್ಕಿಸಬಹುದು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…