Categories: crime news

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು

Shivamogga Tobacco Control Cell booked 51 COTPA violations during a special enforcement drive at the city bus stand, collected ₹4,500 in fines, and removed illegal tobacco advertisements.

ಶಿವಮೊಗ್ಗ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಪ್ರಮುಖ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ವಿಶೇಷ ದಾಳಿ ನಡೆಸಲಾಯಿತು.

ಕಾರ್ಯಾಚರಣೆಯ ವೇಳೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದವರು ಹಾಗೂ ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ ಒಟ್ಟು 51 ಪ್ರಕರಣಗಳನ್ನು ದಾಖಲಿಸಿ ₹4,500 ದಂಡ ವಸೂಲಿ ಮಾಡಲಾಗಿದೆ.

ಇದೇ ವೇಳೆ ಬಸ್ ನಿಲ್ದಾಣದ ಸುತ್ತಮುತ್ತಲಿನ ಅಂಗಡಿ-ಮುಂಗಟ್ಟುಗಳಲ್ಲಿ ಅಳವಡಿಸಲಾಗಿದ್ದ ಕಾನೂನುಬಾಹಿರ ತಂಬಾಕು ಜಾಹೀರಾತು ಫಲಕಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

ದಾಳಿ ವೇಳೆ ತಂಬಾಕು ಮಾರಾಟಗಾರರು ಮತ್ತು ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಹಾನಿ, ಕೋಟ್ಪಾ ಕಾಯ್ದೆಯ ನಿಯಮಗಳು ಹಾಗೂ ಕಾನೂನು ಉಲ್ಲಂಘನೆಯ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ರವಿರಾಜ್, ಪ್ರವೀಣ್, ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

19 hours ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

1 day ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

2 days ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

2 days ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

2 days ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

2 days ago