ಆನಂದಪುರ ; ‘ಪ್ರಾಚೀನ ಬಂಗಾರದ ನಾಣ್ಯ’ ಹೆಸರಿನಲ್ಲಿ ₹9.60 ಲಕ್ಷ ವಂಚನೆ – ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಖದೀಮರು

ಆನಂದಪುರ ; ‘ಪ್ರಾಚೀನ ಬಂಗಾರದ ನಾಣ್ಯ’ ಹೆಸರಿನಲ್ಲಿ ₹9.60 ಲಕ್ಷ ವಂಚನೆ – ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಖದೀಮರು

A Mysuru man was allegedly cheated of ₹9.60 lakh in Shivamogga after fraudsters lured him with a fake deal involving ancient gold coins and treasure. Police have registered a case and launched an investigation.

ಶಿವಮೊಗ್ಗ: ಹಳೆಯ ಕಾಲದ ನಿಧಿ ಹಾಗೂ ಪ್ರಾಚೀನ ಬಂಗಾರದ ನಾಣ್ಯಗಳ ಆಸೆ ತೋರಿಸಿ ಮೈಸೂರು ಮೂಲದ ವ್ಯಕ್ತಿಯೊಬ್ಬರಿಗೆ ₹9.60 ಲಕ್ಷ ವಂಚನೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಮೈಸೂರಿನ ಕೆ.ಆರ್.ಪುರ ನಿವಾಸಿ ಜೆ. ಜಗದೀಶ್ (41) ವಂಚನೆಗೊಳಗಾದವರಾಗಿದ್ದು, ಅವರ ದೂರಿನ ಮೇರೆಗೆ ಆನಂದಪುರ ಪೊಲೀಸರು ಮಂಜು ಸೇರಿದಂತೆ ಐವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ದೂರಿನ ಪ್ರಕಾರ, ಆರೋಪಿಗಳು ಜಗದೀಶ್ ಅವರನ್ನು ಸಂಪರ್ಕಿಸಿ ಶಿವಮೊಗ್ಗದ ರಹಸ್ಯ ಸ್ಥಳವೊಂದರಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಪ್ರಾಚೀನ ಬಂಗಾರದ ನಾಣ್ಯಗಳು ಹಾಗೂ ನಿಧಿ ಸಿಕ್ಕಿರುವುದಾಗಿ ನಂಬಿಸಿದ್ದಾರೆ. ನಕಲಿ ಚಿನ್ನದ ನಾಣ್ಯಗಳನ್ನು ತೋರಿಸಿ ಅವು ಅಸಲಿ ಪುರಾತನ ನಾಣ್ಯಗಳೆಂದು ವಿಶ್ವಾಸ ಮೂಡಿಸಿದ್ದಾರೆ.

ಇದನ್ನು ನಿಜವೆಂದು ನಂಬಿದ ಜಗದೀಶ್ ಅವರು ನಾಣ್ಯಗಳನ್ನು ಖರೀದಿಸಲು ಒಪ್ಪಿಕೊಂಡಿದ್ದು, ಜೂನ್ 3ರಂದು ಅರ್ಧ ಕೆಜಿ ಬಂಗಾರದ ನಾಣ್ಯಗಳನ್ನು ₹10 ಲಕ್ಷಕ್ಕೆ ನೀಡುವುದಾಗಿ ಆರೋಪಿಗಳು ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಣದ ವ್ಯವಸ್ಥೆಗಾಗಿ ಜಗದೀಶ್ ತಮ್ಮ ಮನೆಯ ದಾಖಲೆಗಳು ಹಾಗೂ ಶ್ಯೂರಿಟಿ ಚೆಕ್ ನೀಡಿ ಫೈನಾನ್ಸ್ ಸಂಸ್ಥೆಯಿಂದ ₹10 ಲಕ್ಷ ಸಾಲ ಪಡೆದಿದ್ದರು.

ನಂತರ ಶಿವಮೊಗ್ಗಕ್ಕೆ ಬಂದ ಜಗದೀಶ್ ಅವರಿಂದ ಆರೋಪಿಗಳು ₹9.60 ಲಕ್ಷ ನಗದು ಹಣ ಪಡೆದಿದ್ದಾರೆ. ಇದೇ ವೇಳೆ ಸಿನಿಮೀಯ ರೀತಿಯಲ್ಲಿ ಘಟನೆಗೆ ಹೊಸ ತಿರುವು ಸಿಕ್ಕಿದೆ. ವ್ಯವಹಾರ ನಡೆಯುತ್ತಿದ್ದ ಸ್ಥಳಕ್ಕೆ ಎರಡು ಬೈಕ್‌ಗಳಲ್ಲಿ ನಾಲ್ವರು ಅಪರಿಚಿತರು ಆಗಮಿಸಿ, “ನೀವು ಯಾವ ಊರಿನವರು? ಇಲ್ಲಿ ಸ್ಮಗ್ಲಿಂಗ್ ಮಾಡುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತಿದ್ದೀರಾ?” ಎಂದು ಗದರಿಸಿದ್ದಾರೆ.

ಈ ಗೊಂದಲದ ನಡುವೆ ಅಲ್ಲಿದ್ದ ಮೊದಲ ಇಬ್ಬರು ಆರೋಪಿಗಳು “ಯಾರೋ ಬಂದಿದ್ದಾರೆ, ಓಡಿ ಹೋಗಿ” ಎಂದು ಹೇಳಿ, ಜಗದೀಶ್ ಅವರ ಕೈಯಲ್ಲಿದ್ದ ₹9.60 ಲಕ್ಷ ನಗದು ಹಣದ ಬ್ಯಾಗ್ ಹಾಗೂ ನಾಣ್ಯಗಳಿದ್ದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಅಲ್ಲದೆ, ಘಟನೆಯ ವಿಡಿಯೋ ಚಿತ್ರೀಕರಿಸುತ್ತಿದ್ದ ಮನೋಜ್ ಅವರ ಮೊಬೈಲ್ ಹಾಗೂ ಜಗದೀಶ್ ಅವರ ಮೊಬೈಲ್ ಫೋನ್‌ಗಳನ್ನೂ ಕಸಿದುಕೊಂಡು ಉಳಿದವರು ಬೈಕ್‌ಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.

ತಾವು ಮೋಸ ಹೋಗಿರುವುದು ತಿಳಿದ ಬಳಿಕ ಜಗದೀಶ್ ಅವರು ಪೊಲೀಸರಿಗೆ ದೂರು ನೀಡಿದ್ದು, ಆನಂದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

13 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

13 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

13 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

13 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

21 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

2 days ago