Categories: Uncategorized

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು

Shivamogga MP B.Y. Raghavendra led a delegation to meet Chief Minister D.K. Shivakumar, urging the establishment of a High Court Circuit Bench in Shivamogga and immediate correction of crop insurance compensation anomalies affecting farmers.

ಬೆಂಗಳೂರು, ಜೂನ್ 24: ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಕೀಲರ ಸಂಘಗಳ ಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕಾನೂನು ಸಮುದಾಯ ಮತ್ತು ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದ ನಿಯೋಗ, ನ್ಯಾಯಾಂಗ ಸೇವೆಗಳನ್ನು ಜನರ ಹತ್ತಿರಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು.

ನಿಯೋಗದಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಹಾಗೂ ಅರುಣ್ ಡಿ.ಎಸ್., ಶಿವಮೊಗ್ಗ, ಸಾಗರ ಹಾಗೂ ಶಿಕಾರಿಪುರ ವಕೀಲರ ಸಂಘಗಳ ಪದಾಧಿಕಾರಿಗಳು ಮತ್ತು ಹಿರಿಯ ವಕೀಲರು ಭಾಗವಹಿಸಿದ್ದರು.

ಶಿವಮೊಗ್ಗವು ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಪ್ರಮುಖ ಆಡಳಿತ, ಶಿಕ್ಷಣ ಮತ್ತು ವಾಣಿಜ್ಯ ಕೇಂದ್ರವಾಗಿದ್ದು, ಉತ್ತಮ ಸಂಪರ್ಕ ವ್ಯವಸ್ಥೆಯನ್ನು ಹೊಂದಿದೆ. ಹೀಗಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯಿಂದ ಶಿವಮೊಗ್ಗ ಮಾತ್ರವಲ್ಲದೆ ಚಿಕ್ಕಮಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಸಾರ್ವಜನಿಕರಿಗೂ ನ್ಯಾಯಾಂಗ ಸೇವೆಗಳನ್ನು ಸುಲಭವಾಗಿ ಪಡೆಯಲು ಅನುಕೂಲವಾಗಲಿದೆ ಎಂದು ಸಂಸದ ರಾಘವೇಂದ್ರ ವಿವರಿಸಿದರು.

ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವವರೆಗೆ ಶಿವಮೊಗ್ಗ ಜಿಲ್ಲೆಯನ್ನು ಬೆಂಗಳೂರಿನ ಹೈಕೋರ್ಟ್ ಪ್ರಧಾನ ಪೀಠದ ವ್ಯಾಪ್ತಿಯಲ್ಲಿಯೇ ಮುಂದುವರಿಸಬೇಕು ಎಂದು ಸಂಸದರು ಒತ್ತಾಯಿಸಿದರು. ಪಶ್ಚಿಮ ಘಟ್ಟ ಪ್ರದೇಶದ ಭೌಗೋಳಿಕ ಸವಾಲುಗಳು ಹಾಗೂ ಮಳೆಗಾಲದಲ್ಲಿ ಎದುರಾಗುವ ಸಂಚಾರ ಅಡಚಣೆಗಳನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗವನ್ನು ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಸೇರಿಸಬಾರದು ಎಂದು ಅವರು ಮನವಿ ಮಾಡಿದರು.

ಇದೇ ವೇಳೆ, 2024-25ನೇ ಸಾಲಿನ ಪುನರ್ ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (R-WBCIS) ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ರೈತರಿಗೆ ನೀಡಲಾದ ಪರಿಹಾರ ಮೊತ್ತದಲ್ಲಿನ ವ್ಯತ್ಯಾಸಗಳ ವಿಚಾರವನ್ನೂ ಸಂಸದರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಟೆಲಿಮೆಟ್ರಿಕ್ ಮಳೆ ಮಾಪಕಗಳು ಮತ್ತು ಹವಾಮಾನ ಕೇಂದ್ರಗಳ ಅಸಮರ್ಪಕ ನಿರ್ವಹಣೆಯಿಂದ ಒಂದೇ ರೀತಿಯ ಹವಾಮಾನ ಪರಿಸ್ಥಿತಿಯನ್ನು ಎದುರಿಸಿದ ರೈತರಿಗೆ ವಿಭಿನ್ನ ಪ್ರಮಾಣದ ಪರಿಹಾರ ದೊರೆತಿದ್ದು, ಇದರಿಂದ ರೈತರಲ್ಲಿ ವ್ಯಾಪಕ ಅಸಮಾಧಾನ ಉಂಟಾಗಿದೆ ಎಂದು ಅವರು ತಿಳಿಸಿದರು.

ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿಗಳು ಸಲ್ಲಿಸಿರುವ ಪ್ರಸ್ತಾವನೆ ಹಲವು ತಿಂಗಳುಗಳಿಂದ ಸರ್ಕಾರದ ಮಟ್ಟದಲ್ಲಿ ಬಾಕಿಯಿದ್ದು, ಅದನ್ನು ತ್ವರಿತವಾಗಿ ಪರಿಶೀಲಿಸಿ ಪರಿಹಾರ ವಿತರಣೆಯಲ್ಲಿನ ವೈಪರೀತ್ಯಗಳನ್ನು ಸರಿಪಡಿಸಿ ಸಂತ್ರಸ್ತ ರೈತರಿಗೆ ನ್ಯಾಯಯುತ ಪರಿಹಾರ ನೀಡುವಂತೆ ಸಂಸದ ರಾಘವೇಂದ್ರ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

2 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

2 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

17 hours ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

17 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

23 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

2 days ago