Categories: Blog

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar.

ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ನಗರದ ಮೀನಾಕ್ಷಿ ಭವನದ ಎದುರಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಲಾಯಿತು. ಸರ್ಕಾರದ ಈ ಮಹತ್ವದ ನಿರ್ಧಾರವನ್ನು ವಿದ್ಯಾರ್ಥಿಗಳು ಸ್ವಾಗತಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು. ಈ ವೇಳೆ ಮಾತನಾಡಿದ ವಿಜಯ್ ಕುಮಾರ್, ಗ್ರಾಮೀಣ ಪ್ರದೇಶದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ದೊಡ್ಡ ನೆರವಾಗಲಿದ್ದು, ಶಿಕ್ಷಣ ಮುಂದುವರಿಸಲು ಮತ್ತು ಆರ್ಥಿಕ ಹೊರೆ ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ಹೊರಬಿದ್ದ ಮೊದಲ ಪ್ರಮುಖ ಆದೇಶಗಳಲ್ಲಿ ಇದೂ ಒಂದಾಗಿದ್ದು, ವಿದ್ಯಾರ್ಥಿಗಳು ಅವರ ಭಾವಚಿತ್ರಗಳನ್ನು ಪ್ರದರ್ಶಿಸಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ನಗರ ಅಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಅಬ್ದುಲ್ ಸುಭಾನ್, ಆದಿತ್ಯ, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಾಜಿ ರಾವ್, ವರುಣ್, ಯೂಸೂಫ್, ಶ್ರೀಕಾಂತ್, ಹಾಲಸ್ವಾಮಿ, ಮಹಾದೇವ ಹಿರೇಮಠ, ಜೀವಿತ್, ಶಶಿಕಲಾ, ಸೃಜನ್, ದೀಪಕ್, ಅಭಿಲಾಷ್, ಲೋಹಿತ್, ಚೇತನ್, ಅನಿರುದ್ಧ ಸೇರಿದಂತೆ ಹಲವರು ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

3 hours ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

3 hours ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

4 hours ago

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…

4 hours ago

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…

7 hours ago

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…

9 hours ago