ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ
A 26-year-old man was found murdered inside his house in Suttukote village of Shivamogga taluk. Police suspect business rivalry behind the brutal killing and have launched an investigation.
ಶಿವಮೊಗ್ಗ, ಜೂನ್ 20: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಗ್ರಾಮದ ನಿವಾಸಿ ಪ್ರವೀಣ್ (26) ಎಂದು ಗುರುತಿಸಲಾಗಿದೆ.ಪ್ರವೀಣ್ ಟ್ರಾಕ್ಟರ್ ಬಾಡಿಗೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿ ಎಂದಿನಂತೆ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ತಲೆ ಭಾಗಕ್ಕೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಮೃತ ಪ್ರವೀಣ್ ಅವರು ಕೆಲವು ಯುವಕರಿಗೆ ಕೆಲಸದ ನಿಮಿತ್ತ ಬೆಳಿಗ್ಗೆ ಮನೆಗೆ ಬರಲು ಸೂಚಿಸಿದ್ದರೆಂದು ತಿಳಿದುಬಂದಿದೆ. ಅದರಂತೆ ಶುಕ್ರವಾರ ಬೆಳಗ್ಗೆ ಅವರು ಹಲವು ಬಾರಿ ಕರೆ ಮಾಡಿದರೂ ಫೋನ್ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ತೆರಳಿ ಪರಿಶೀಲಿಸಿದಾಗ ಹತ್ಯೆ ನಡೆದಿರುವುದು ಪತ್ತೆಯಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ ವ್ಯವಹಾರಿಕ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಮಾಹಿತಿ ತಿಳಿದ ತಕ್ಷಣ ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…