ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ
The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026.
ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ 50 ರಷ್ಟು ರಿಯಾಯಿತಿಯೊಂದಿಗೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.
ಸಾರಿಗೆ ಇಲಾಖೆಯ ಅಧೀನದಲ್ಲಿ 1991ರಿಂದ 2022ರವರೆಗೆ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ದಾಖಲಿಸಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ.
ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇನ್ನೂ ಇತ್ಯರ್ಥಗೊಳ್ಳದೆ ಬಾಕಿ ಉಳಿದಿವೆ. ಅರ್ಹ ವಾಹನ ಮಾಲೀಕರು ಈ ಸೌಲಭ್ಯದ ಪ್ರಯೋಜನ ಪಡೆದು ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದು.
ದಂಡ ಪಾವತಿಗೆ ನಿಗದಿಪಡಿಸಿರುವ ವಿಶೇಷ ರಿಯಾಯಿತಿ ಅವಧಿಯು ಜೂನ್ 21, 2026ರಿಂದ ಜುಲೈ 10, 2026ರವರೆಗೆ ಇರಲಿದೆ. ಈ ಅವಧಿಯಲ್ಲಿ ವಾಹನ ಮಾಲೀಕರು ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ನಿಗದಿತ ಅವಧಿಯೊಳಗೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಾಹನ ಮಾಲೀಕರಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ ಮಾಡಿದ್ದಾರೆ.
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…