Categories: crime news

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!?

“ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದವನು ಮರುಕ್ಷಣವೇ ಬಾರದ ಲೋಕಕ್ಕೆ ಪಯಣಿಸಿದ!” – ಉಲ್ಲಾಸ್ ಗೌಡ ಸ್ನೇಹಿತ ಘಟನೆ ಬಗ್ಗೆ ಹೇಳಿದ್ದೇನು.!?

Bengaluru youth Ullas Gowda, son of film producer Ba.Ma. Harish, died of a suspected heart attack during a Kodachadri trek. His friend recounts the heartbreaking final moments before the tragedy.

ಪ್ರಕೃತಿಯ ಮಡಿಲಿನಲ್ಲಿ ಸಂತಸದಿಂದ ಕಾಲ ಕಳೆಯಲು ಹೋದ ಜೀವವೊಂದು ಮರಳಿ ಮನೆಗೆ ಬಾರದಂತೆ ಕಣ್ಮರೆಯಾದ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿ ಬೆಟ್ಟದಲ್ಲಿ ನಡೆದಿದೆ. ಬೆಂಗಳೂರಿನ ಯುವಕ, ಖ್ಯಾತ ಸಿನಿಮಾ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಬಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ (28) ಚಾರಣದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸ್ನೇಹಿತರೊಂದಿಗೆ ನಗುನಗುತ್ತಾ ಬೆಟ್ಟವೇರಿದ್ದ ಯುವಕ, ಕೆಳಗಿಳಿಯುವಾಗ ಹೆಣವಾಗಿ ಮರಳಿದ್ದು ವಿಧಿಯ ಕ್ರೂರ ಆಟಕ್ಕೆ ಸಾಕ್ಷಿಯಾಗಿದೆ. ಘಟನೆಯ ವೇಳೆ ಜೊತೆಯಲ್ಲಿದ್ದ ಉಲ್ಲಾಸ್ ಅವರ ಸ್ನೇಹಿತ ಹಾಗೂ ಸಂಬಂಧಿ ಸುರೇಶ್, ಕಣ್ಣೀರಿಡುತ್ತಲೇ ಆ ಕರಾಳ ಕ್ಷಣಗಳನ್ನು ‘ಪೋಸ್ಟ್ ಮ್ಯಾನ್ ನ್ಯೂಸ್’ ಜೊತೆ ಹಂಚಿಕೊಂಡಿದ್ದಾರೆ.

ಸ್ನೇಹಿತನ ಕರುಳು ಹಿಂಡುವ ಮಾತುಗಳು:

“ಕಳೆದ ಮೂರು-ನಾಲ್ಕು ತಿಂಗಳುಗಳಿಂದ ಎಲ್ಲಾದರೂ ಹೊರಗಡೆ ಸುತ್ತಾಡಿಕೊಂಡು ಬರೋಣ ಎಂದು ಉಲ್ಲಾಸ್ ಹೇಳುತ್ತಿದ್ದ. ಆತನಿಗೆ ನಿದ್ದೆ ಬಿಟ್ಟು ಕಾರು ಓಡಿಸುವುದು ಇಷ್ಟವಿರಲಿಲ್ಲ. ಹೀಗಾಗಿ ಬೆಂಗಳೂರಿನ ಟ್ರಾವೆಲ್ಸ್ ಒಂದರ ಮೂಲಕ ಕೊಡಚಾದ್ರಿ ಟ್ರೆಕ್ಕಿಂಗ್ ಬುಕ್ ಮಾಡಿದ್ದೆವು. ಬೆಳಗ್ಗೆಯಿಂದ ಬಹಳ ಲವಲವಿಕೆಯಿಂದಲೇ ಇದ್ದ ಆತ, ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುತ್ತಾ ಸರ್ವಜ್ಞ ಪೀಠದವರೆಗೂ ಖುಷಿಯಿಂದಲೇ ಚಾರಣ ಮಾಡಿದ್ದ.”

ಕ್ಯಾಮೆರಾದಲ್ಲಿ ಸೆರೆಯಾದ ಆ ಕಡೆಯ ನಗು!

“ಬೆಟ್ಟದಿಂದ ಕೆಳಗೆ ಇಳಿಯುವಾಗ ತನ್ನ ಮೊಬೈಲ್ ಕೊಟ್ಟು ಫೋಟೋ ತೆಗೆಯುವಂತೆ ಕೇಳಿದ. ನಾನು ಆತನ ನಗುಮುಖದ ಫೋಟೋಗಳನ್ನು ಕ್ಲಿಕ್ಕಿಸಿದೆ. ಆದರೆ, ಆ ನಗು ಕೇವಲ ಒಂದೆರಡು ನಿಮಿಷಗಳಿಗಷ್ಟೇ ಸೀಮಿತವಾಗಿತ್ತು. ಫೋಟೋ ತೆಗೆಸಿಕೊಂಡ ಮರುಕ್ಷಣವೇ ಎದೆ ಹಿಡಿದುಕೊಂಡು ಕುಸಿದು ಬಿದ್ದ! ನನಗೇನು ಮಾಡಬೇಕೆಂದೇ ತೋಚಲಿಲ್ಲ, ಗಾಬರಿಯಿಂದ ಬಾಯಿಗೆ ಬಾಯಿ ಕೊಟ್ಟು ಉಸಿರಾಟ (ಪಂಪ್) ನೀಡಲು ಯತ್ನಿಸಿದೆ, ಆದರೆ ಆತ ಸುಧಾರಿಸಿಕೊಳ್ಳಲಿಲ್ಲ” ಎಂದು ಹೇಳುತ್ತಾ ಸುರೇಶ್ ಬಿಕ್ಕಿ ಬಿಕ್ಕಿ ಅತ್ತರು.

ಉಸಿರು ಉಳಿಸಿಕೊಳ್ಳಲು ನಡೆದ ಆ ಹೋರಾಟ:

“ಕೂಡಲೇ ‘ವೈದ್ಯರು ಯಾರಾದರೂ ಇದ್ದೀರಾ?’ ಎಂದು ನಾನು ಕಿರುಚಿಕೊಂಡೆ. ಅಲ್ಲೇ ಬೇರೆ ಜೀಪಿನಲ್ಲಿ ಬಂದಿದ್ದ ಮಹಿಳಾ ವೈದ್ಯರೊಬ್ಬರು ಓಡಿಬಂದು ಸಿಪಿಆರ್ (CPR) ಮಾಡಿದರು. ‘ಪಲ್ಸ್ ಇದೆ, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ’ ಎಂದು ಅವರು ಹೇಳಿದರು. ತಕ್ಷಣವೇ ಸ್ಥಳೀಯರ ನೆರವಿನಿಂದ ಹತ್ತಿರದ ನಗರದ ಸರ್ಕಾರಿ ಆಸ್ಪತ್ರೆಗೆ ಕರೆತಂದೆವು. ಅಲ್ಲಿನ ವೈದ್ಯರು ಆಂಬುಲೆನ್ಸ್‌ನಲ್ಲೇ ಇಂಜೆಕ್ಷನ್ ನೀಡಿ, ‘ಇನ್ನೂ ಪಲ್ಸ್ ಇದೆ, ಆದಷ್ಟು ಬೇಗ ಹೊಸನಗರ ಆಸ್ಪತ್ರೆಗೆ ಕರೆದೊಯ್ಯಿರಿ’ ಎಂದರು. ಆದರೆ, ಅಲ್ಲಿಗೆ ತಲುಪುವಷ್ಟರಲ್ಲೇ ನಮ್ಮನೆಲ್ಲಾ ಬಿಟ್ಟು ಹೋಗಿದ್ದ,” ಎಂದು ಸುರೇಶ್ ಘಟನೆಯನ್ನು ವಿವರಿಸಿದ್ದಾರೆ.

ಶೋಕಸಾಗರದಲ್ಲಿ ಮುಳುಗಿದ ಕುಟುಂಬ:

ಉಲ್ಲಾಸ್ ಅವರು ಸುರೇಶ್ ಹಾಗೂ ಇತರ 11 ಮಂದಿ ಸದಸ್ಯರೊಂದಿಗೆ ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ಕೊಡಚಾದ್ರಿಗೆ ಆಗಮಿಸಿದ್ದರು. ಸದ್ಯ ಮೃತದೇಹವನ್ನು ಹೊಸನಗರ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.

ಕಣ್ಮಣಿಯಂತಹ ಮಗನನ್ನು ಕಳೆದುಕೊಂಡ ಬಾ.ಮಾ. ಹರೀಶ್ ಅವರ ಕುಟುಂಬ ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ. ಟ್ರೆಕ್ಕಿಂಗ್‌ಗೆಂದು ನಗುನಗುತ್ತಾ ಹೋದ ಯುವಕ ಶವವಾಗಿ ಮರಳುತ್ತಿರುವುದು ಇಡೀ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…

12 hours ago

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

21 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

2 days ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

2 days ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

2 days ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago