37 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ದರೋಡೆ ಪ್ರಕರಣದ ಆರೋಪಿ : 1989 ರಲ್ಲಿ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ದರೋಡೆ

37 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ದರೋಡೆ ಪ್ರಕರಣದ ಆರೋಪಿ : 1989 ರಲ್ಲಿ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ದರೋಡೆ

Malur Police arrested Abdul Khader, an accused in a 1989 dacoity case at Mrugavadhe in Thirthahalli, after 37 years of absconding. He was traced to Kerala and remanded to judicial custody.

ಶಿವಮೊಗ್ಗ, ಜು. 30: 1989ರಲ್ಲಿ ತೀರ್ಥಹಳ್ಳಿ ತಾಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ಡಕಾಯಿತಿ ಪ್ರಕರಣದ ಪ್ರಮುಖ ಆರೋಪಿಯನ್ನು 37 ವರ್ಷಗಳ ಬಳಿಕ ಮಾಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1989ರಲ್ಲಿ ನಡೆದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳೂರು ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 63/1989 ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಕಲಂ 395ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಅಬ್ದುಲ್ ಖಾದರ್ @ ಮೊಣು (57), ಮೂಲತಃ ಮಂಗಳೂರು ಜಿಲ್ಲೆಯ ಬಜ್ಪೆ ಸಮೀಪದ ಪೆರ್ರ ನಿವಾಸಿಯಾಗಿದ್ದು, ಕಳೆದ 37 ವರ್ಷಗಳಿಂದ ತಲೆಮರೆಸಿಕೊಂಡಿದ್ದ.

ಈತನ ವಿರುದ್ಧ ನ್ಯಾಯಾಲಯವು LPR No. 20/2001 ದಾಖಲಿಸಿ ಪರಾರಿಯಾಗಿರುವ ಆರೋಪಿಯಾಗಿ ಘೋಷಿಸಿತ್ತು.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರ್ಯಪ್ಪ ಎ.ಜಿ., ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ ಅರವಿಂದ ಕಲಗುಚ್ಚಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಮಾಳೂರು ವೃತ್ತದ ಸಿಪಿಐ ರಾಜಶೇಖರ್ ಹಾಗೂ ಮಾಳೂರು ಪೊಲೀಸ್ ಠಾಣೆಯ ಪಿಎಸ್‌ಐ ಸುನಿಲ್ ಬಿ.ಸಿ. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮೇಘರಾಜ್ ಮತ್ತು ಅಭಿಲಾಶ್ ಅವರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಕೇರಳ ರಾಜ್ಯದ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮ ವ್ಯಾಪ್ತಿಯ ಪಾಡಿ–ಪುರ ಸಂಗೋಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದರು.

ಬಂಧಿತ ಆರೋಪಿಯನ್ನು ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

11 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

11 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

12 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

14 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

18 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

18 hours ago