ತಂದೆಯ ಪ್ರಾಣ ಉಳಿಸಿದ 9 ವರ್ಷದ ರಿಯಲ್ ಹೀರೋ: ಬಾಲಕ ನಂದನ್ ಸಾಹಸಕ್ಕೆ ತಹಶೀಲ್ದಾರ್ ಸಲಾಮ್!

ತಂದೆಯ ಪ್ರಾಣ ಉಳಿಸಿದ 9 ವರ್ಷದ ರಿಯಲ್ ಹೀರೋ: ಬಾಲಕ ನಂದನ್ ಸಾಹಸಕ್ಕೆ ತಹಶೀಲ್ದಾರ್ ಸಲಾಮ್!

A 9-year-old boy, Nandan from Goragodu in Hosanagara taluk, saved his father’s life by alerting villagers after he was swept away in a stream. Tahsildar Bharath Raj honoured the young hero for his extraordinary courage and presence of mind.

​ಹೊಸನಗರ: ಕೇವಲ 9 ವರ್ಷದ ಬಾಲಕನೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಅಪ್ರತಿಮ ಧೈರ್ಯದಿಂದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತನ್ನ ತಂದೆಯನ್ನು ರಕ್ಷಿಸಿ ‘ರಿಯಲ್ ಹೀರೋ’ ಎನಿಸಿಕೊಂಡಿದ್ದಾನೆ. ತಾಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋರಗೋಡು ಗ್ರಾಮದ ನಂದನ್ ಎಂಬ ಬಾಲಕನೇ ಈ ಅಪ್ರತಿಮ ಸಾಹಸ ಮೆರೆದವನು. ಈತನ ಕಾರ್ಯಕ್ಕೆ ಇದೀಗ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಸೇರಿದಂತೆ ಇಡೀ ಸಮಾಜವೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಘಟನೆಯ ಹಿನ್ನೆಲೆ:

ನಂದನ್ ಮತ್ತು ಆತನ ತಂದೆ ಚಂದ್ರು ಅವರು ಗೊರಗೋಡು ಸಮೀಪದ ಹೊಳೆಯ ಬಳಿ ತೆರಳಿದ್ದಾಗ ಈ ಆಘಾತಕಾರಿ ಘಟನೆ ನಡೆದಿದೆ. ಚಂದ್ರು ಅವರಿಗೆ ಏಕಾಏಕಿ ಫಿಟ್ಸ್ ಕಾಣಿಸಿಕೊಂಡು, ಕಾಲು ಜಾರಿ ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಸುಮಾರು 2 ಕಿಲೋಮೀಟರ್‌ಗಳಷ್ಟು ದೂರ ಕೊಚ್ಚಿಕೊಂಡು ಹೋಗಿದ್ದಾರೆ.

​ತನ್ನ ಕಣ್ಣೆದುರೇ ತಂದೆ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಕಂಡರೂ ಎದೆಗುಂದದ ಬಾಲಕ ನಂದನ್, ನದಿ ದಡದ ಗುಂಟ 2 ಕಿಲೋಮೀಟರ್‌ವರೆಗೆ ಓಡುತ್ತಲೇ ಹಿಂಬಾಲಿಸಿದ್ದಾನೆ. ನಂತರ ಸಮೀಪದ ಮನೆಗಳಿಗೆ ಓಡಿಹೋಗಿ, “ನನ್ನ ತಂದೆ ಹೊಳೆಯಲ್ಲಿ ತೇಲಿ ಹೋಗುತ್ತಿದ್ದಾರೆ, ದಯವಿಟ್ಟು ಬಂದು ಕಾಪಾಡಿ” ಎಂದು ಸ್ಥಳೀಯರ ನೆರವು ಕೋರಿದ್ದಾನೆ.

ಜೀವ ಉಳಿಸಿದ ಸಮಯಪ್ರಜ್ಞೆ:

ಕೂಡಲೇ ಕಾರ್ಯಪ್ರವೃತ್ತರಾದ ಗ್ರಾಮಸ್ಥರು ಹೊಳೆಯಲ್ಲಿ ಹುಡುಕಾಟ ಆರಂಭಿಸಿದರು. ಅದೇ ಹೊತ್ತಿಗೆ ನೀರಿನಲ್ಲಿ ತೇಲುತ್ತಿದ್ದ ತಂದೆಯ ಜರ್ಕಿನ್ ಅನ್ನು ಗುರುತಿಸಿದ ನಂದನ್, ತಂದೆ ಅದೇ ಸ್ಥಳದಲ್ಲಿ ಇರಬಹುದು ಎಂದು ನಿಖರವಾಗಿ ಮಾಹಿತಿ ನೀಡಿದ್ದಾನೆ. ತಕ್ಷಣವೇ ಸ್ಥಳೀಯರು ಚಂದ್ರು ಅವರನ್ನು ನೀರಿನಿಂದ ಮೇಲೆತ್ತಿ, ಪ್ರಥಮ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಸನ್ಮಾನ ಮತ್ತು ಗೌರವ:

ಈ ಸಾಹಸದ ಬಗ್ಗೆ ಮಾಹಿತಿ ತಿಳಿದ ತಕ್ಷಣ, ಹೊಸನಗರ ತಹಶೀಲ್ದಾರ್ ಭರತ್ ರಾಜ್ ಅವರು ಬಾಲಕ ನಂದನ್ ಹಾಗೂ ಆತನ ಪೋಷಕರನ್ನು ತಮ್ಮ ಕಚೇರಿಗೆ ಆಹ್ವಾನಿಸಿ, ಬಾಲಕನ ಬೆನ್ನು ತಟ್ಟಿ ತಾಲೂಕ್ ಆಡಳಿತದ ವತಿಯಿಂದ ಸನ್ಮಾನಿಸಿದರು. ಅಲ್ಲದೆ, ಹೊಸನಗರ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘ, ವಿಶ್ವಕರ್ಮ ಸಮಾಜ ವತಿಯಿಂದಲೂ ಈ ಪುಟಾಣಿ ಜೀವ ರಕ್ಷಕನಿಗೆ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಗೌತಮ್ ಆಚಾರ್ಯ, ವಿಎಚ್‌ಪಿ ಸಂಚಾಲಕ ಸುದೀಂದ್ರ ಪಂಡಿತ್, ಪತ್ರಕರ್ತ ನಗರ ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

​ಗೋರಗೋಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿರುವ ಈ ಬಾಲಕನಿಗೆ ಸರ್ಕಾರದಿಂದ ಶೌರ್ಯ ಪ್ರಶಸ್ತಿ ಹಾಗೂ ಮುಂದಿನ ಶಿಕ್ಷಣಕ್ಕಾಗಿ ವಿಶೇಷ ಸಹಾಯಧನ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

6 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

6 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

6 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

18 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

18 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

19 hours ago