ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಟೈರ್ ಹಾಗೂ ರಿಮ್ ಕದ್ದ ಖದೀಮನ ಬಂಧನ, ಸಾವಿರಾರು ರೂ ಮೌಲ್ಯದ ಮಾಲು ಜಪ್ತಿ
Anandapura Police in Shivamogga district solved a Tata Intra stepney tyre theft case, arrested one accused, and recovered three stolen tyres and rims worth Rs. 45,000.
ಸಾಗರ ಗ್ರಾಮಾಂತರ ವೃತ್ತದ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಟಾಟಾ ಇಂಟ್ರಾ ವಾಹನಗಳ ಸ್ಟೆಪ್ನಿ ಟೈರ್ ಹಾಗೂ ರಿಮ್ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಠಾಣಾಧಿಕಾರಿ ಪಿಎಸ್ಐ ಪ್ರವೀಣ್ ಎಸ್.ಪಿ. ಅವರ ನೇತೃತ್ವದ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸುವ ಮೂಲಕ ಕಳುವಾದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕಳೆದ ಫೆಬ್ರವರಿ 6ರಂದು ರಾತ್ರಿ ಆಚಾಪುರ ಗ್ರಾಮದ ಶಿವ ಶ್ರೇಯ ಎಂಟರ್ಪ್ರೈಸಸ್ ಮಳಿಗೆಯ ಮುಂಭಾಗ ನಿಲ್ಲಿಸಲಾಗಿದ್ದ ಮೂರು ಟಾಟಾ ಇಂಟ್ರಾ ವಾಹನಗಳಿಂದ ಖದೀಮರು ಸ್ಟೆಪ್ನಿ ಟೈರ್ ಹಾಗೂ ರಿಮ್ಗಳನ್ನು ಕಳವು ಮಾಡಿದ್ದರು. ಕಳುವಾದ ವಸ್ತುಗಳ ಒಟ್ಟು ಮೌಲ್ಯ 45 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿತ್ತು. ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್. ಕಲಂ 303(2) ಅನ್ವಯ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ, ಠಾಣಾಧಿಕಾರಿ ಪಿಎಸ್ಐ ಪ್ರವೀಣ್ ಎಸ್.ಪಿ. ಅವರು ಹೆಡ್ ಕಾನ್ಸ್ಟೇಬಲ್ ಪ್ರಶಾಂತ್ ಹಾಗೂ ಕಾನ್ಸ್ಟೇಬಲ್ ಉಮೇಶ್ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ತನಿಖೆ ಚುರುಕುಗೊಳಿಸಿದರು. ನಿಖರ ಮಾಹಿತಿಯ ಮೇರೆಗೆ ಕಾರ್ಯಾಚರಣೆಗಿಳಿದ ತಂಡ, ಜುಲೈ 3ರಂದು ಶಿವಮೊಗ್ಗ ನಗರದ ಟಿಪ್ಪು ನಗರ 5ನೇ ಕ್ರಾಸ್ ನಿವಾಸಿ ಸೋನು (27) ಎಂಬಾತನನ್ನು ಬಂಧಿಸಿದ್ದಾರೆ.
ವೃತ್ತಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಈತನೇ ಕಳ್ಳತನ ಎಸಗಿದ್ದಾಗಿ ತಿಳಿದುಬಂದಿದೆ. ಬಂಧಿತನಿಂದ ಪ್ರಕರಣಕ್ಕೆ ಸಂಬಂಧಿಸಿದ ₹45,000 ಮೌಲ್ಯದ ಮೂರು ಸ್ಟೆಪ್ನಿ ಟೈರ್ ಹಾಗೂ ರಿಮ್ಗಳನ್ನು ಪೊಲೀಸರು ಸಂಪೂರ್ಣವಾಗಿ ಜಪ್ತಿ ಮಾಡಿದ್ದಾರೆ.
ಈ ಕಳವು ಪ್ರಕರಣವನ್ನು ಅತ್ಯಂತ ಚಾಕಚಕ್ಯತೆಯಿಂದ ಭೇದಿಸಿದ ಪಿಎಸ್ಐ ಪ್ರವೀಣ್ ಎಸ್.ಪಿ. ಮತ್ತು ಅವರ ಸಿಬ್ಬಂದಿ ವರ್ಗದ ಕಾರ್ಯವೈಖರಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…
ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…
ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ Scorpio car overturns near Ganapathi Kere in Sagara after…
‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ…
RIPPONPETE | ಬೀದಿ ಬದಿಯ ಸರ್ಕಸ್ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…
ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…