ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ
Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated.
ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು ನಮ್ಮ ಸಂಸ್ಕೃತಿಯ ಬೇರುಗಳನ್ನು ಅರಿತು ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳುವ ಪ್ರೇರಕ ಶಕ್ತಿಯಾಗಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಅನೇಕ ಅನಾಚಾರ ಮತ್ತು ಭ್ರಷ್ಟಾಚಾರಗಳಲ್ಲಿ ವಿದ್ಯಾವಂತರೇ ಭಾಗಿಯಾಗುತ್ತಿರುವುದು ದುರದೃಷ್ಟಕರ. ವಿವಿಧ ಇಲಾಖೆಗಳಲ್ಲಿನ ಲಂಚಗುಳಿತನ ಹಾಗೂ ಭ್ರಷ್ಟಾಚಾರದ ಹಿಂದೆ ಉನ್ನತ ಶಿಕ್ಷಣ ಮತ್ತು ಉನ್ನತ ಹುದ್ದೆ ಹೊಂದಿರುವವರೇ ಇರುವುದನ್ನು ನೋಡಿದಾಗ ಬೇಸರವಾಗುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಜಗತ್ತಿನ ಹಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಭೌಗೋಳಿಕವಾಗಿ ಸಣ್ಣದಾಗಿದ್ದರೂ, ತಮ್ಮ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಶಿಸ್ತುಬದ್ಧ ಜೀವನಶೈಲಿಯಿಂದ ವಿಶ್ವದ ಶ್ರೇಷ್ಠ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಂಡಿವೆ. ಭಾರತವೂ ಅಭಿವೃದ್ಧಿ ಹೊಂದಬೇಕಾದರೆ ಪ್ರತಿಯೊಬ್ಬ ನಾಗರಿಕನಲ್ಲಿ ಮೊದಲು ಪೌರ ಪ್ರಜ್ಞೆ ಬೆಳೆಯಬೇಕು. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವುದು ಮತ್ತು ಸಮಾಜದ ಬಗ್ಗೆ ಜವಾಬ್ದಾರಿಯುತ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿ ಶಿವಮೊಗ್ಗ ಜಿಲ್ಲೆಯಲ್ಲೇ ಉತ್ತಮ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಹೆಮ್ಮೆಯ ವಿಷಯ. ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡುವ ಮಟ್ಟದಲ್ಲಿ ದಾಖಲಾತಿ ಹೆಚ್ಚಾಗಿರುವುದು ಹಾಗೂ ಪೋಷಕರು ಈ ಕಾಲೇಜಿನ ಮೇಲೆ ವಿಶ್ವಾಸ ಇಡುವುದು ಇಲ್ಲಿನ ಗುಣಮಟ್ಟದ ಬೋಧನೆಗೆ ಸಾಕ್ಷಿಯಾಗಿದೆ. ಇಂತಹ ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ 2026ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 60 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರೊ. ಗಣೇಶ್ ಮೂರ್ತಿ ಶಿಕ್ಷಣ ಪ್ರತಿಷ್ಠಾನದ ಪ್ರತಿಭಾ ಪುರಸ್ಕಾರ ಹಾಗೂ ಡಾ. ಜಿ.ಡಿ. ನಾರಾಯಣಪ್ಪ ದತ್ತಿ ನಿಧಿ ಪ್ರಶಸ್ತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ವೈದ್ಯರತ್ನ ಡಾ. ಜಿ.ಡಿ. ನಾರಾಯಣಪ್ಪ, ವಿಶ್ರಾಂತ ಪ್ರಾಂಶುಪಾಲ ಮಹಮದ್ ನಜಹತ್, ಅನಂತಮೂರ್ತಿ ಅವುಕ್, ಎಸ್ಡಿಸಿ ಕಾರ್ಯಾಧ್ಯಕ್ಷ ಟಿ.ಡಿ. ಸೋಮಶೇಖರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಹಾಲಪ್ಪ ಸಂಕೂರು ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಉಪನ್ಯಾಸಕ ಶಂಕರಪ್ಪ ಕಲ್ಲೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗೇಶ್ ಸೋಮಯಾಜಿ ಸ್ವಾಗತಿಸಿ, ಫ್ರಾನ್ಸಿಸ್ ಬೆಂಜಮಿನ್ ಕಾರ್ಯಕ್ರಮ ನಿರೂಪಿಸಿದರು.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…