ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ
Shivamogga MLA B. Gopalakrishna Belur criticizes former minister K.S. Eshwarappa over environmental issues, highway projects, pump storage opposition, arecanut crisis, airport development and electricity privatization.
ಶಿವಮೊಗ್ಗ, ಜು.09: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಬಿ. ಗೋಪಾಲಕೃಷ್ಣ ಬೇಳೂರು ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು ಪದೇ ಪದೇ ಕಾಂಗ್ರೆಸ್ ಹಾಗೂ ಮುಸ್ಲಿಮರ ವಿರುದ್ಧ ಹೇಳಿಕೆ ನೀಡುವುದನ್ನು ಟೀಕಿಸಿದರು.
ಬಿಜೆಪಿಯಲ್ಲೇ ಈಶ್ವರಪ್ಪ ಅವರ ರಾಜಕೀಯ ಭವಿಷ್ಯ ಇಲ್ಲ. ಪಕ್ಷಕ್ಕೆ ಮರಳಿದರೂ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇಲ್ಲ ಎಂದು ಬೇಳೂರು ಅಭಿಪ್ರಾಯಪಟ್ಟರು.
ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡಿದ ಹಲವಾರು ನಾಯಕರನ್ನು ಬಿಜೆಪಿ ಕಡೆಗಣಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅನಂತಕುಮಾರ್ ಹೆಗಡೆ ಅವರಂತೆಯೇ ಈಶ್ವರಪ್ಪ ಅವರನ್ನೂ ಬಿಜೆಪಿ ಮೂಲೆಗುಂಪು ಮಾಡಲಿದೆ ಎಂದು ಅವರು ಹೇಳಿದರು.
ಶಿವಮೊಗ್ಗದಲ್ಲಿ ಗೊಂದಲದ ರಾಜಕೀಯ ನಡೆಯುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಈಶ್ವರಪ್ಪ ಅವರನ್ನು ಪ್ರಶ್ನಿಸಿದ ಬೇಳೂರು, “ಪರಿಸರದ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಲಕ್ಷಾಂತರ ಮರಗಳು ನಾಶವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಯಾಕೆ ವಿರೋಧಿಸಲಿಲ್ಲ?” ಎಂದು ಪ್ರಶ್ನಿಸಿದರು.
ಈಶ್ವರಪ್ಪ ಹಿರಿಯ ನಾಯಕರಾಗಿರುವ ಕಾರಣ ಅವರಿಗೆ ಗೌರವವಿದೆ. ಆದರೆ ಸಾರ್ವಜನಿಕ ವಿಚಾರಗಳಲ್ಲಿ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಸಲಹೆ ನೀಡಿದರು.
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಉಂಟಾಗಿರುವ ಸಮಸ್ಯೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಡಿಕೆ ಬೆಲೆ ಈಗಾಗಲೇ ಸುಮಾರು ₹5,000ರವರೆಗೆ ಕುಸಿದಿದ್ದು, ಕೇಂದ್ರ ಸರ್ಕಾರ ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಡಾನ್ ಯೋಜನೆಯಡಿ ಹೆಚ್ಚಿನ ವಿಮಾನ ಸೇವೆ ಕಲ್ಪಿಸುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.
ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ಯಾವುದೇ ಅವಕಾಶ ನೀಡುವುದಿಲ್ಲ. ರೈತರು ಹಾಗೂ ವಿದ್ಯುತ್ ನೌಕರರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಬೇಸೂರು ಭಾಗದಲ್ಲಿ ಪ್ರಸ್ತಾಪವಾಗಿದ್ದ ಅಣು ವಿದ್ಯುತ್ ಸ್ಥಾವರ ಯೋಜನೆ ಸಂಪೂರ್ಣವಾಗಿ ರದ್ದಾಗಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ರೈತರ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಎಂ. ಶ್ರೀಕಾಂತ್, ಶಂಕರಘಟ್ಟ ರಮೇಶ್, ಹುಲ್ತಿಕೊಪ್ಪ ಹಾಗೂ ಶಿಜು ಪಾಶ ಉಪಸ್ಥಿತರಿದ್ದರು.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…