ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.!

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.!

Tension erupted in Shivamogga as BJP workers attempted to storm the Congress office during a protest. Police intervened, detained protesters, and tightened security in the area.

ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದ ಪರಿಣಾಮ ಕೆಲಕಾಲ ತೀವ್ರ ವಾಗ್ವಾದ ನಡೆಯಿತು.

ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿದ್ದ ಬ್ಯಾನರ್‌ಗಳನ್ನು ಹರಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಚೇರಿಯೊಳಗೆ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ತಡೆದರು.

ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಪೊಲೀಸರು ಕೆಲ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ವಶಕ್ಕೆ ಪಡೆಯುವ ಸಂದರ್ಭದಲ್ಲಿ ಓರ್ವ ಕಾರ್ಯಕರ್ತ ಪೊಲೀಸ್ ವಾಹನ ಏರಲು ನಿರಾಕರಿಸಿದ ಕಾರಣ ಪೊಲೀಸರು ಆತನನ್ನು ಬಲವಂತವಾಗಿ ವಾಹನಕ್ಕೆ ಕೂರಿಸಿ ಸ್ಥಳದಿಂದ ಕರೆದೊಯ್ದರು.

ಇದೇ ವೇಳೆ ಪ್ರತಿಭಟನೆಯ ಸಂದರ್ಭ ಒಬ್ಬ ಕಾರ್ಯಕರ್ತ ಕೈಯಲ್ಲಿ ಪೆಟ್ರೋಲ್ ಬಾಟಲಿ ಹಿಡಿದು ಬಂದಿರುವುದು ಕಂಡುಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಆತನನ್ನೂ ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಘಟನೆಯ ಬಳಿಕ ಕಾಂಗ್ರೆಸ್ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

3 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

8 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

9 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

12 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

12 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

1 day ago