29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ
A Bolero carrying 29 migrant workers overturned near the 15th Mile under Thunga Nagar Police limits in Shivamogga. All passengers, including women and children, escaped with minor injuries. Police have registered a case and launched an investigation.
ಶಿವಮೊಗ್ಗ, ಜು. 13: ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 15ನೇ ಮೈಲಿಗಲ್ಲಿನ ಬಳಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ.
ವಾಹನದಲ್ಲಿ ಪ್ರಯಾಣಿಸುತ್ತಿದ್ದ 29 ಮಂದಿ ಕಾರ್ಮಿಕರು, ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿಯಂತೆ, ವಾಹನದಲ್ಲಿ ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಸೇರಿಸಿ ಒಟ್ಟು 29 ಮಂದಿ ಕಾರ್ಮಿಕರಿದ್ದು, ವಾಹನದಲ್ಲಿ ಮಿತಿಮೀರಿದ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಇವರೆಲ್ಲರೂ ಮಧ್ಯಪ್ರದೇಶದ ರಾಜಗಢ, ವಿದಿಶಾ ಹಾಗೂ ಗುನಾ ಜಿಲ್ಲೆಗಳ ನಿವಾಸಿಗಳಾಗಿದ್ದಾರೆ.
ಮಧ್ಯಪ್ರದೇಶ ಮೂಲದ ಮೇಸ್ತ್ರಿ ಗೋವಿಂದ್ ಎಂಬುವವರು ದಿನಕ್ಕೆ ₹450 ಕೂಲಿ ನೀಡುವ ಭರವಸೆಯೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಭಾಗದ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರನ್ನು ಕರೆತರುತ್ತಿದ್ದರು. ಈ ವೇಳೆ ಕಳಸದತ್ತ ಸಾಗುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ವಾಹನದಿಂದ ಹೊರತೆಗೆದರು. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನ ಅಜಾಗರೂಕತೆ, ಅತಿವೇಗ ಅಥವಾ ವಾಹನದಲ್ಲಿ ಮಿತಿಮೀರಿದ ಜನರನ್ನು ಸಾಗಿಸಿರುವುದೇ ಅಪಘಾತಕ್ಕೆ ಕಾರಣವೇ ಎಂಬ ಕುರಿತು ತನಿಖೆ ಮುಂದುವರಿದಿದೆ. ಸ್ಥಳೀಯ ಆಡಳಿತ ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸುತ್ತಿದೆ.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…