HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ
Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court.
ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಗ್ರಾಮದ ಮಹಮದ್ ಸಲೀಂ ಬಾಳೂರ್ (34) ಮಕಬುಲ್ ಅಹ್ಮದ್ ಬಡಿಗೇರ (22) ಸುಲೇಮಾನ್ ಕೋಲಾರಿ (26) –ಹಾಗೂ ಮಲ್ಲಿಕ್ ರಿಹಾನ್ (25) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಜೂನ್ 19, 2026ರಂದು ಹೊಸನಗರ ತಾಲ್ಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ದುಷ್ಕರ್ಮಿಗಳು ಹಸುವಿನ ಕರುವನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಎಂ.ಐ. ಗೌಡಪ್ಪಗೌಡ್ರ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.
ಈ ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಪಿಎಸ್ಐ ಶಂಕರಗೌಡ ಪಾಟೀಲ್, ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ರಾಜುರೆಡ್ಡಿ, ನಗರ ಠಾಣೆಯ ಪಿಎಸ್ಐ ಶಿವಾನಂದ ವೈ.ಕೆ., ಪೊಲೀಸ್ ಸಿಬ್ಬಂದಿ ಹಾಗೂ ಶಿವಮೊಗ್ಗ ಎಎನ್ಸಿ ವಿಭಾಗದ ಅಧಿಕಾರಿಗಳ ಸಹಕಾರದೊಂದಿಗೆ ಜುಲೈ 4ರಂದು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಹೊಸನಗರ ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹೊಸನಗರ ಠಾಣೆಯ ಸಿಬ್ಬಂದಿಗಳಾದ ಕಿರಣ್ ಕುಮಾರ್ ಡಿ.ವೈ., ಶಿವಕುಮಾರನಾಯ್ಕ, ಮಾಯಪ್ಪ ಗೋಕಾವಿ, ರವಿಚಂದ್ರ, ಸುನಿಲ್, ಗೋಪಾಲಕೃಷ್ಣ , ಮಧುಸೂಧನ್ , ಜಗದೀಶ್ ಹಾಗೂ ಶಿವಮೊಗ್ಗ ಎಎನ್ಸಿ ವಿಭಾಗದ ಗುರುರಾಜ ಮತ್ತು ಇಂದೇಶ ಅವರು ಭಾಗವಹಿಸಿದ್ದರು.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…