ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ
Hosanagara Block Congress staged a protest against the alleged NEET exam scam and the arrest of Rahul Gandhi, demanding a fair investigation and condemning police action on protesting students.
ಹೊಸನಗರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಂಧನವನ್ನು ಖಂಡಿಸಿ ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೋಳಿ ಅವರ ನೇತೃತ್ವದಲ್ಲಿ ಕೋರ್ಟ್ ಸರ್ಕಲ್ ಬಳಿ ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಚ್ಚಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿ.ಜಿ. ಚಂದ್ರಮೋಳಿ ಅವರು, “ನೀಟ್ ಪರೀಕ್ಷೆ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಕುರಿತು ಕೇಂದ್ರ ಸರ್ಕಾರ ತಕ್ಷಣ ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು ಹತ್ತಿಕ್ಕುವ ಉದ್ದೇಶದಿಂದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಹಾಗೂ ರಾಹುಲ್ ಗಾಂಧಿಯನ್ನು ಬಂಧಿಸಿರುವುದು ಖಂಡನೀಯ” ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…