ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ
Two accused have been arrested in connection with the alleged rape of a second-year B.Com student in Konandur, Thirthahalli. Police have also registered a case against another accused for harassment and criminal intimidatio
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನ ವಿರುದ್ಧವೂ ಕಿರುಕುಳ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮಾಹಿತಿಯ ಪ್ರಕಾರ, ತೀರ್ಥಹಳ್ಳಿ ತಾಲೂಕಿನ ಕಾಲೆಜೊಂದರಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯು ಜುಲೈ 9, 2026ರಂದು ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ಸುಮಾರು ಮೂರು ತಿಂಗಳ ಹಿಂದೆ ಮೊದಲ ಆರೋಪಿ ಕೋಣಂದೂರು ನಿವಾಸಿ ಆಸಿಫ್ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಮೂಲಕ ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಮೇ 7, 2026ರಂದು ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಕರೆದುಕೊಂಡು ಹೋಗಿ, ಈ ಹಿಂದೆ ಪಡೆದುಕೊಂಡಿದ್ದ ಯುವತಿಯ ಫೋಟೋವನ್ನು ತನ್ನ ಫೋಟೋದೊಂದಿಗೆ ಅಸಭ್ಯವಾಗಿ ಎಡಿಟ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ನಂತರವೂ ಹಲವು ಬಾರಿ ಕಾರಿನಲ್ಲಿ ವಿವಿಧ ಸ್ಥಳಗಳಿಗೆ ಕರೆದುಕೊಂಡು ಹೋಗಿ ಇದೇ ರೀತಿಯ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದ ಬಗ್ಗೆ ತಿಳಿದಿದ್ದ ಎರಡನೇ ಆರೋಪಿ ಸಾಹಿಲ್, ಯುವತಿಯನ್ನು ಕರೆಸಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಲು ಯತ್ನಿಸಿದ್ದಲ್ಲದೆ, ತನ್ನ ಮಾತು ಕೇಳದಿದ್ದರೆ ಆಸಿಫ್ ಮತ್ತು ಯುವತಿಯ ನಡುವಿನ ವಿಚಾರವನ್ನು ಊರಿನವರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಇನ್ನೊಬ್ಬ ಆರೋಪಿ ಸುಹೇಲ್, ಯುವತಿಯ ಮೊಬೈಲ್ ಸಂಖ್ಯೆಯನ್ನು ಪಡೆದು ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದಲ್ಲದೆ, ಕಾಲೇಜಿಗೆ ಹೋಗುವಾಗ ಮತ್ತು ಮರಳುವಾಗ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿ ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಮತ್ತೋರ್ವ ಆರೋಪಿಯ ವಿರುದ್ಧವೂ ಕಾನೂನು ಕ್ರಮ ಮುಂದುವರಿದಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…