ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ಆರೋಪ: ಇಬ್ಬರ ಬಂಧನ
Two accused have been arrested in connection with the alleged rape of a second-year B.Com student in Konandur, Thirthahalli. Police have also registered a case against another accused for harassment and criminal intimidatio
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನ ವಿರುದ್ಧವೂ ಕಿರುಕುಳ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮಾಹಿತಿಯ ಪ್ರಕಾರ, ತೀರ್ಥಹಳ್ಳಿ ತಾಲೂಕಿನ ಕಾಲೆಜೊಂದರಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯು ಜುಲೈ 9, 2026ರಂದು ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ಸುಮಾರು ಮೂರು ತಿಂಗಳ ಹಿಂದೆ ಮೊದಲ ಆರೋಪಿ ಕೋಣಂದೂರು ನಿವಾಸಿ ಆಸಿಫ್ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಮೂಲಕ ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಮೇ 7, 2026ರಂದು ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಕರೆದುಕೊಂಡು ಹೋಗಿ, ಈ ಹಿಂದೆ ಪಡೆದುಕೊಂಡಿದ್ದ ಯುವತಿಯ ಫೋಟೋವನ್ನು ತನ್ನ ಫೋಟೋದೊಂದಿಗೆ ಅಸಭ್ಯವಾಗಿ ಎಡಿಟ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ನಂತರವೂ ಹಲವು ಬಾರಿ ಕಾರಿನಲ್ಲಿ ವಿವಿಧ ಸ್ಥಳಗಳಿಗೆ ಕರೆದುಕೊಂಡು ಹೋಗಿ ಇದೇ ರೀತಿಯ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದ ಬಗ್ಗೆ ತಿಳಿದಿದ್ದ ಎರಡನೇ ಆರೋಪಿ ಸಾಹಿಲ್, ಯುವತಿಯನ್ನು ಕರೆಸಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಲು ಯತ್ನಿಸಿದ್ದಲ್ಲದೆ, ತನ್ನ ಮಾತು ಕೇಳದಿದ್ದರೆ ಆಸಿಫ್ ಮತ್ತು ಯುವತಿಯ ನಡುವಿನ ವಿಚಾರವನ್ನು ಊರಿನವರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಇನ್ನೊಬ್ಬ ಆರೋಪಿ ಸುಹೇಲ್, ಯುವತಿಯ ಮೊಬೈಲ್ ಸಂಖ್ಯೆಯನ್ನು ಪಡೆದು ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದಲ್ಲದೆ, ಕಾಲೇಜಿಗೆ ಹೋಗುವಾಗ ಮತ್ತು ಮರಳುವಾಗ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿ ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಮತ್ತೋರ್ವ ಆರೋಪಿಯ ವಿರುದ್ಧವೂ ಕಾನೂನು ಕ್ರಮ ಮುಂದುವರಿದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…