Headlines

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ

A KSRTC bus travelling from Davanagere to Shivamogga crashed into a roadside tree near Holehatti, Holalur. Around 7-8 passengers sustained minor injuries, while a major tragedy was averted.

ಶಿವಮೊಗ್ಗ, ಜು. 9: ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ತೀವ್ರ ಹಾನಿಯಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ನಡೆದಿದೆ.

ದಾವಣಗೆರೆಯಿಂದ ಶಿವಮೊಗ್ಗದತ್ತ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಅಪಘಾತದ ತೀವ್ರತೆಗೆ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಸುಮಾರು 7ರಿಂದ 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ಸಹಕರಿಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಸ್ತೆ ಬದಿಯಲ್ಲಿ ನಿಂತಿದ್ದ ಓಮ್ನಿ ವಾಹನ ಏಕಾಏಕಿ ಬಲಭಾಗಕ್ಕೆ ಚಲಿಸಿದೆ. ಇದೇ ವೇಳೆ ಎದುರಿನಿಂದ ಸಿಮೆಂಟ್ ತುಂಬಿದ ಬೊಲೆರೋ ವಾಹನ ಬಂದ ಹಿನ್ನೆಲೆಯಲ್ಲಿ ಅಪಘಾತ ತಪ್ಪಿಸಲು ಬಸ್ ಚಾಲಕ ಎಡಭಾಗಕ್ಕೆ ವಾಹನ ತಿರುಗಿಸಿದ್ದಾರೆ. ಈ ವೇಳೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ಬಳಿಕ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಬಳಿಕ ಪರಿಸ್ಥಿತಿ ಸಹಜಗೊಂಡಿತು. ಘಟನೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

About The Author