ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ
Former Zilla Panchayat President Kalagodu Ratnakar emphasized the importance of education and social unity during the Gangamathastha community’s Prathibha Puraskara programme held near Ripponpet, where meritorious SSLC and PUC students were honoured.
ರಿಪ್ಪನ್ಪೇಟೆ: ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಡಲು ಸಮಾಜ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು.
ಕೊಡೂರು ಸಮೀಪದ ಅಮ್ಮನಘಟ್ಟ ಸಭಾಭವನದಲ್ಲಿ ಹೊಸನಗರ ತಾಲೂಕು ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ತಾಲೂಕು ಗಂಗಾಮತಸ್ಥರ ಸಮಾಜದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಸಮಾಜದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ವಸತಿ ನಿಲಯಗಳಂತಹ ಸೌಲಭ್ಯಗಳನ್ನು ಆರಂಭಿಸಿ, ಶಿಕ್ಷಣದ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಯಾವುದೇ ಸಮಾಜ ಹಿಂದುಳಿದಿದ್ದರೆ ಅದನ್ನು ಮುಂಚೂಣಿಗೆ ತರುವುದು ಸಮುದಾಯದ ಜವಾಬ್ದಾರಿಯಾಗಿದೆ. ಕೀಳರಿಮೆ ಬಿಟ್ಟು ಸಮಾಜದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಗಂಗಾಮತಸ್ಥರ ಸಮಾಜದ ಅಧ್ಯಕ್ಷ ಚಿದಂಬರ ಹೂವಿನಕೋಣೆ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಬದಲಾವಣೆ ಸಾಧ್ಯ. ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ರೂಪಿಸಬೇಕು ಎಂದು ಹೇಳಿದರು.
ಬಲಿಷ್ಠ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು ಎಂದು ತಿಳಿಸಿದರು.
ಸಮಾಜದ ಏಳಿಗೆಗಾಗಿ ಸಂಘವು ನಿರಂತರವಾಗಿ ಕಾರ್ಯನಿರ್ವಹಿಸಲಿದ್ದು, ಅದರ ಯಶಸ್ಸಿಗೆ ಸಮಾಜದ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕ್ ಗಂಗಾಮತಸ್ಥ ಸಂಘದ ಗೌರಾವಧ್ಯಕ್ಷರಾದ ಉಮೇಶ್ ಕೆ ವೈ, ಬೆನಕಪ್ಪ , ಗಂಗಾಧರ್ ಕೆ , ಡಿ.ಬಿ. ಚಂದ್ರಪ್ಪ,ಪ್ರಕಾಶ್ ಕೆ ಡಿ , ಚಂದ್ರಶೇಖರ್, ಸತ್ಯನಾರಾಯಣ, ಗಣಪತಿ ಬಿ ಕೆ, ಮೇಘರಾಜ್, ಉಮೇಶ್ ಹೆಚ್ ಬಿ , ಲೀಲಾವತಿ ನಾಗರಾಜ್, ಸರಸ್ವತಿ ಗಣಪತಿ , ಪುಟ್ಟಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕು. ವಿದ್ಯಾ ಮಟ್ಟಿಮನೆ ಹಾಗೂ ಭುವನ್ ಜಯನಗರ ನಿರೂಪಿಸಿದರು, ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್ ಜಿ ಸ್ವಾಗತಿಸಿದರು, ಲೋಹಿತ್ ಕುಮಾರ್ ವಂದಿಸಿದರು.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…