ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ
Heavy rain and strong winds uprooted over 60 electricity poles and several trees in Ripponpet region, disrupting power supply to many villages. MESCOM teams are restoring electricity.
ರಿಪ್ಪನ್ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಯ ಪರಿಣಾಮ ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಬಿರುಗಾಳಿಯ ಅಬ್ಬರಕ್ಕೆ ಹತ್ತಾರು ಮರಗಳು ಧರೆಗುರುಳಿದ್ದು, 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿರುವುದರಿಂದ ಅನೇಕ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಜೇನಿ, ಕೋಡೂರು, ಗರ್ತಿಕೆರೆ, ಹೆದ್ದಾರಿಪುರ, ಹುಂಚ, ಬೆಳ್ಳೂರು ಸೇರಿದಂತೆ ರಿಪ್ಪನ್ಪೇಟೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದು, ಸಾರ್ವಜನಿಕರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಕಡೆಗಳಲ್ಲಿ ಮರಗಳು ವಿದ್ಯುತ್ ತಂತಿಗಳ ಮೇಲೆಯೇ ಬಿದ್ದಿರುವುದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
ಮೆಸ್ಕಾಂ ಸಿಬ್ಬಂದಿ ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದು, ಹಾನಿಗೊಳಗಾದ ಕಂಬಗಳನ್ನು ಬದಲಿಸಿ ವಿದ್ಯುತ್ ಸಂಪರ್ಕವನ್ನು ಮರುಸ್ಥಾಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಹವಾಮಾನ ಅನುಕೂಲಕರವಾಗುತ್ತಿದ್ದಂತೆ ಹಂತ ಹಂತವಾಗಿ ಎಲ್ಲಾ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರು ಮುರಿದು ಬಿದ್ದಿರುವ ವಿದ್ಯುತ್ ತಂತಿಗಳು ಹಾಗೂ ವಿದ್ಯುತ್ ಕಂಬಗಳ ಸಮೀಪ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ವಿದ್ಯುತ್ ತಂತಿಗಳ ಮೇಲೆ ಬಿದ್ದಿರುವ ಮರಗಳನ್ನು ಯಾವುದೇ ಕಾರಣಕ್ಕೂ ಮುಟ್ಟಬಾರದು ಎಂದು ಇಲಾಖೆ ಮನವಿ ಮಾಡಿದೆ.
ಯಾವುದೇ ತುರ್ತು ಪರಿಸ್ಥಿತಿ ಕಂಡುಬಂದಲ್ಲಿ ಕೂಡಲೇ ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಜನರು ಸಹಕರಿಸಿದರೆ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಿ ವಿದ್ಯುತ್ ಸಂಪರ್ಕವನ್ನು ಪುನಃ ಆರಂಭಿಸಲು ಸಾಧ್ಯವಾಗಲಿದೆ ಎಂದು ಇಲಾಖೆ ತಿಳಿಸಿದೆ.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…