ಐಷರಾಮಿ ವಾಹನದಲ್ಲಿ ದನ ಕಳ್ಳತನ: ಕಾರು ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಐಷರಾಮಿ ವಾಹನದಲ್ಲಿ ದನ ಕಳ್ಳತನ: ವಾಹನ ಸಮೇತ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

Ripponpet police have cracked a cattle theft case involving a luxury vehicle, arresting two accused within 15 days. The swift operation was led by PSI Raju Reddy. Read the full crime report on Postman News.

ರಿಪ್ಪನ್‌ಪೇಟೆ: ಯಾರಿಗೂ ಅನುಮಾನ ಬಾರದಂತೆ ಐಷರಾಮಿ ವಾಹನವನ್ನು ಬಳಸಿಕೊಂಡು ಜಾನುವಾರುಗಳನ್ನು ಕಳವು ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಜುಲೈ ತಿಂಗಳ ಆರಂಭದಲ್ಲಿ ನಡೆದಿದ್ದ ಈ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕೇವಲ 15 ದಿನಗಳೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ.

​ಘಟನೆಯ ಹಿನ್ನೆಲೆ :

​ಜುಲೈ 3, 2026 ರ ರಾತ್ರಿ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿರುವ ಗಿರಿಗೌಡ ಎಂಬುವವರ ಮನೆಯ ಸಮೀಪ ಈ ಘಟನೆ ಜರುಗಿತ್ತು. ಕತ್ತಲಲ್ಲಿ ಐಷರಾಮಿ ವಾಹನದಲ್ಲಿ ಬಂದ ದುಷ್ಕರ್ಮಿಗಳು, ದನಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಐಷರಾಮಿ ವಾಹನ ಬಳಸಿದ್ದರಿಂದ ಸ್ಥಳೀಯರಿಗೆ ತಕ್ಷಣಕ್ಕೆ ಯಾವುದೇ ಅನುಮಾನ ಬಂದಿರಲಿಲ್ಲ. ಈ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ದೇವರಾಜ್ ಕೆರೆಹಳ್ಳಿ ಅವರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದರು.

​ಕ್ಷಿಪ್ರ ಕಾರ್ಯಾಚರಣೆ ಮತ್ತು ಬಂಧನ

​ದೂರು ದಾಖಲಿಸಿಕೊಂಡ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಇಲಾಖೆ, ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ನೇರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿತ್ತು. ಪಿಎಸ್‌ಐ ರಾಜು ರೆಡ್ಡಿ ಅವರ ನೇತೃತ್ವದ ಈ ತಂಡವು ತನಿಖೆಯನ್ನು ಚುರುಕುಗೊಳಿಸಿ, ಕೃತ್ಯ ನಡೆದ ಕೇವಲ 15 ದಿನಗಳ ಅಂತರದಲ್ಲಿ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ವಶಕ್ಕೆ ಪಡೆಯಲಾಗಿದೆ.

​ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಹಳೆಮಂಡ್ಲಿ ನಿವಾಸಿ ಅಮೀರ್ ಸುಹೇಲ್ (26 ವರ್ಷ) ಮತ್ತು ಮಹಮ್ಮದ್ ಇಸ್ರಾರ್ ಉಲ್ಲಾ ಖಾನ್ (20 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿಗಳು ಬಳಸಿದ್ದ ಇನ್ನೀವಾ ಕಾರನ್ನು ವಶಕ್ಕೆ ಪಡೆಯಲಾಗಿದೆ.

​ಈ ಯಶಸ್ವಿ ಕಾರ್ಯಾಚರಣೆಯಲ್ಲಿಪೊಲೀಸ್ ಸಿಬ್ಬಂದಿಗಳಾದ ರಾಮಚಂದ್ರ ಎನ್.ಎಂ, ಅಶೋಕ್, ವಿಶ್ವನಾಥ್ , ಪರಮೇಶ್ವರಪ್ಪ , ಮತ್ತು ಅವಿನಾಶ್ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಆರೋಪಿಗಳು ಐಷರಾಮಿ ವಾಹನಗಳನ್ನು ಬಳಸಿಕೊಂಡು ಇನ್ನಿತರ ಕಡೆಗಳಲ್ಲೂ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಪೊಲೀಸರ ಈ ತ್ವರಿತ ಕಾರ್ಯಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

6 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

23 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

1 day ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago