Categories: Uncategorized

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಅಧ್ಯಕ್ಷರಾಗಿ ರವೀಂದ್ರ ಬಲ್ಲಾಳ್ ಕಾರ್ಯದರ್ಶಿಯಾಗಿ ರಮೇಶ್ ಹೆಬ್ಬಾರ್ ಪದವಿ ಸ್ವೀಕಾರ

Rotary Club Ripponpet will hold its 2026-27 Installation Ceremony on July 4, featuring the induction of President Ravindra Ballal and Secretary Ramesh Hebbar, along with a merit awards program honoring outstanding SSLC, PUC, and degree students.

ರಿಪ್ಪನ್‌ಪೇಟೆ : ಜುಲೈ04 ರಂದು ಶನಿವಾರ ಸಂಜೆ 05-30 ಕ್ಕೆ   ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂಟಪದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ 2026-27 ನೇ ಸಾಲಿನ ನೂತನ ರೋಟರಿ ಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂಇತನ ಅಧ್ಯಕ್ಷ ರವೀಂದ್ರ ಬಲ್ಲಾಳ್ ಕೆ ತಿಳಿಸಿದರು.

ಪಟ್ಟಣದ ರೋಟರಿಕ್ಲಬ್‌ನ ಸಭಾಂಗಣದಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಎಲೆಕ್ಟ್ ಗವರ್ನರ್ ರೊ. ಸವಂತ ಹೋಬಳಿದಾ‌ರ್ ನೂತನ ಪದಾಧಿಕಾರಿಗಳಿಗೆ ಪದವಿ ಪ್ರಧಾನ ಮಾಡುವರು. ಅಸಿಸ್ಟೆಂಟ್ ಗವರ್ನರ್ ರೊ. ಪಿಹೆಚ್‌ಎಫ್ ನಾಗರಾಜ್ ಎಸ್, ರೋನಲ್ ಲೆಪ್ಟಿನೆಂಟ್ ರೊ. ವಿಷ್ಣುಮೂರ್ತಿ ಎಸ್.ಎಂ.ಮುಖ್ಯ ಅತಿಥಿಗಳಾಗಿ ಭಾಗವಹಿಲಿದ್ದಾರೆಂದು.

ರೋಟರಿಕ್ಲಬ್ ಹಾಲಿ ಅಧ್ಯಕ್ಷ ಕೃಷ್ಣರಾಜ್  ಹಾಗೂ 2026-27 ನೇ ಸಾಲಿನ ರೋಟರಿ ಕ್ಲಬ್ ನೂತನ ಅಧ್ಯಕ್ಷ ರೊ. ರವೀಂದ್ರ ಬಲ್ಲಾಳ್ ಕಾರ್ಯದರ್ಶಿ ರಮೇಶ್ ಹೆಬ್ಬಾರ್ ಇವರಿಗೆ ಪದವಿ ಹಸ್ತಾಂತರ ಮಾಡಲಿದ್ದಾರೆ  ಎಂದು ತಿಳಿದರು.

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರೋಟರಿ ಜಿಲ್ಲಾ 31 82 ವಲಯ11ರ ಅಸಿಸ್ಟೆಂಟ್ ಗವರ್ನರ್ ಎಂ.ಬಿ ಲಕ್ಷ್ಮಣಗೌಡ ಮಾತನಾಡಿ  ಆರೋಗ್ಯ ಶಿಕ್ಷಣ ಸಮಾಜ ಸೇವೆ ಮತ್ತು ಆತಿಥ್ಯದ ಸಲುವಾಗಿ ಸ್ಥಾಪಿಸಲು ಪಟ್ಟ ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ರಿಪ್ಪನ್ ಪೇಟೆಯಲ್ಲಿ ಪ್ರಾರಂಭವಾಗಿ ಇದೀಗ 15 ವರ್ಷಗಳಾಯಿತು, ಆರೋಗ್ಯ ಶಿಕ್ಷಣ, ಕೃಷಿ, ಮತ್ತು ಪಶು ಸಂಗೋಪನೆ  ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ನೂರಾರು ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜ ಸೇವೆಯನ್ನು ಮಾಡುವ ಸದುದ್ದೇಶವನ್ನು ಹೊಂದಿರುವ ನಾಗರಿಕರಿಗೆ ರೋಟರಿ ಸಂಸ್ಥೆಯು ಅತ್ಯುತ್ತಮವಾದ ವೇದಿಕೆಯಾಗಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ರೋಟರಿ ಕ್ಲಬ್ ನ ಗಣೇಶಕಾಮತ್, ಜೆ.ರಾಧಾಕೃಷ್ಣ, ಡಾಕಪ್ಪ, ನಿ.ಮುಖ್ಯ ಶಿಕ್ಷಕ ರಾಧಾಕೃಷ್ಣ ಆರ್, ನೂತನ ಸಮಿತಿಯ ಕಾರ್ಯದರ್ಶಿ ರಮೇಶ್ ಹೆಬ್ಬಾರ್, ನಿಕಟಪೂರ್ವ ಅಧ್ಯಕ್ಷ ಕೃಷ್ಣರಾಜ್ ಹಾಗೂ ಸಬಾಸ್ಟಿನ್ ಮಾಥ್ಯೂಸ್, ಇನ್ನಿತರ ರೋಟರಿ ಕ್ಲಬ್ ಪದಾಧಿಕಾರಿಗಳು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

17 hours ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

1 day ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

2 days ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

2 days ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

2 days ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

2 days ago