RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆ: ರಿಪ್ಪನ್ಪೇಟೆಯಲ್ಲಿ ಪೊಲೀಸ್ ರೂಟ್ ಮಾರ್ಚ್, ಭದ್ರತಾ ಸಿದ್ಧತೆ ಪರಿಶೀಲನೆ
Ripponpete Police conducted a route march ahead of Ganesh Chaturthi and Eid Milad to review security arrangements, traffic management, and ensure peaceful celebrations in the town.
ರಿಪ್ಪನ್ಪೇಟೆ: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದ ರಿಪ್ಪನ್ಪೇಟೆ ಪೊಲೀಸ್ ಇಲಾಖೆ ಮಂಗಳವಾರ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಸಿತು.
ಪಿಎಸ್ಐ ರಾಜುರೆಡ್ಡಿ ಹಾಗೂ ಪೊಲೀಸ್ ಸಿಬ್ಬಂಫ಼ಿಗಳು ಮತ್ತು ಎಸ್.ಎ.ಎಫ್ (SAF) ವಿಶೇಷ ಪೊಲೀಸ್ ಪಡೆಯ ಪೊಲೀಸರು ನೇತೃತ್ವದಲ್ಲಿ ನಡೆದ ರೂಟ್ ಮಾರ್ಚ್ ವೇಳೆ ಹಬ್ಬಗಳ ಮೆರವಣಿಗೆ ಸಾಗುವ ಪ್ರಮುಖ ರಸ್ತೆ ಹಾಗೂ ಸೂಕ್ಷ್ಮ ಪ್ರದೇಶಗಳ ಪರಿಶೀಲನೆ ನಡೆಸಲಾಯಿತು. ಗಣಪತಿ ವಿಸರ್ಜನೆ ಮತ್ತು ಈದ್ ಮಿಲಾದ್ ಮೆರವಣಿಗೆಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆಯನ್ನು ಅವಲೋಕಿಸಿತು.
ವಿಶೇಷವಾಗಿ ವಿನಾಯಕ ಸರ್ಕಲ್ ಹಾಗೂ ಜುಮ್ಮಾ ಮಸೀದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಗಮನ ಹರಿಸಿ, ಕರ್ತವ್ಯ ನಿರ್ವಹಿಸಲಿರುವ ಪೊಲೀಸ್ ಸಿಬ್ಬಂದಿಗೆ ಅಗತ್ಯ ಮುನ್ನೆಚ್ಚರಿಕೆ ಸೂಚನೆಗಳು ಹಾಗೂ ಭದ್ರತಾ ಮಾರ್ಗಸೂಚಿಗಳನ್ನು ನೀಡಲಾಯಿತು.
ಇದರ ಜೊತೆಗೆ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ, ಸಂಚಾರ ನಿಯಂತ್ರಣ, ಜನಸಂದಣಿ ನಿರ್ವಹಣೆ ಸೇರಿದಂತೆ ವಿವಿಧ ಭದ್ರತಾ ಅಂಶಗಳನ್ನು ಪರಿಶೀಲಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಯಿತು. ಸಾರ್ವಜನಿಕರು ಹಬ್ಬಗಳನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ರೂಟ್ ಮಾರ್ಚ್ನಲ್ಲಿ ಎಸ್.ಎ.ಎಫ್ ವಿಶೇಷ ಪೊಲೀಸ್ ಪಡೆಯ ಇನ್ಸ್ಪೆಕ್ಟರ್ ಕಿರಣ್ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಹಾಲಪ್ಪ , ಲಕ್ಷ್ಮಿ , ವಿನೋದ್ ಮತ್ತು ಸಿಬ್ಬಂದಿಗಳಾದ ವಿಶ್ವನಾಥ್ , ರಾಮಚಂದ್ರ , ಅಶೋಕ್ , ಪರಮೇಶ್ವರಪ್ಪ , ಅವಿನಾಶ್ ಹಾಗೂ ಇನ್ನಿತರರು ಭಾಗವಹಿಸಿದ್ದರು.
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…