SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ

SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ

Shivamogga SP Nikhil B assures strict action in the Shikaripura Sangeetha death case, stating no accused will be protected. Four accused have been arrested and the investigation is progressing under his direct supervision.

ಶಿಕಾರಿಪುರ : ಒಂದು ವರ್ಷದ ಬಳಿಕ ಬೆಳಕಿಗೆ ಬಂದಿರುವ ಬಾಲಕಿ ಸಂಗೀತಾ ಸಾವು ಹಾಗೂ ಮೃತದೇಹವನ್ನು ಕಾಡಿನಲ್ಲಿ ವಿಲೇವಾರಿ ಮಾಡಿರುವ ಪ್ರಕರಣ ಮಾನವೀಯ ಸಮಾಜವೇ ತಲೆತಗ್ಗಿಸುವಂತದ್ದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಬಿ. ಹೇಳಿದ್ದಾರೆ. ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಪಟ್ಟಣ ಪೊಲೀಸ್ ಠಾಣೆಯಲ್ಲಿ ಬಂಜಾರ್ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಪ್ರಕರಣದ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಎಸ್‌ಪಿ ನಿಖಿಲ್ ಬಿ., ತನಿಖೆ ಯಾವುದೇ ಕಾರಣಕ್ಕೂ ದಾರಿ ತಪ್ಪಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇಲಾಖೆಯ ಕೆಲ ಅಧಿಕಾರಿಗಳ ಶಾಮೀಲಿನ ಕುರಿತು ಆರೋಪಗಳು ಕೇಳಿಬಂದಿದ್ದು, ಆ ಆಯಾಮದಲ್ಲಿಯೂ ಸೂಕ್ಷ್ಮವಾಗಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.ಪ್ರಕರಣದ ತನಿಖೆ ತಮ್ಮ ನೇರ ಉಸ್ತುವಾರಿಯಲ್ಲಿ ನಡೆಯುತ್ತಿದ್ದು, ತಪ್ಪಿತಸ್ಥರೆಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈಗಾಗಲೇ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಜೋಗ ಸಮೀಪದ ಸಿದ್ಧಾಪುರ ಬಳಿಯ ಕಾಡಿನಲ್ಲಿ ಪತ್ತೆಯಾದ ಬಾಲಕಿಯ ಶವದ ಅವಶೇಷಗಳನ್ನು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯ (FSL) ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಎಸ್‌ಪಿ ತಿಳಿಸಿದರು.

ಪ್ರಕರಣದ ಕುರಿತು ವಿವಿಧ ಸಂಘಟನೆಗಳು ನಡೆಸಿರುವ ಪ್ರತಿಭಟನೆಗಳು ಹಾಗೂ ಸಲ್ಲಿಸಿರುವ ಆರೋಪಗಳನ್ನು ದಾಖಲಿಸಿಕೊಂಡಿದ್ದು, ಎಲ್ಲ ಆಯಾಮಗಳಲ್ಲಿಯೂ ಸಮಗ್ರ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಈ ವೇಳೆ ಮಾತನಾಡಿದ ಸಾಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತನಾಯ್ಕ, ಈ ಪ್ರಕರಣ ಇಡೀ ಸಮಾಜ ಹಾಗೂ ವ್ಯವಸ್ಥೆಯ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆರೋಪಿಸಿದರು. ಬಾಲಕಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ಕಾರ್ಮಿಕ ಇಲಾಖೆ ಗಮನಹರಿಸಿಲ್ಲ. ಶಾಲೆ ತೊರೆದಿದ್ದರೂ ಶಿಕ್ಷಕರು ಹಾಗೂ ಅಂಗನವಾಡಿ ಸಿಬ್ಬಂದಿ ಗಮನಿಸಿಲ್ಲ. ಒಂಟಿ ಪೋಷಕರ ಮಕ್ಕಳ ಮೇಲೆ ನಿಗಾ ಇಡುವ ವ್ಯವಸ್ಥೆಯೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸದ ಕಾರಣ ಇಂತಹ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.

‘ಮಿಷನ್ ಸುರಕ್ಷಾ’ ಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದರೆ ಇಂತಹ ಘಟನೆಗಳನ್ನು ತಡೆಯಬಹುದಾಗಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

6 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

11 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

2 days ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

2 days ago