ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

A 14-year-old orphan girl’s missing case in Shikaripura takes a dark turn after a year. Her skeleton was found in a suitcase dumped in Mavinagundi forest.

ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು ಹಸನಾಗುತ್ತಿದೆ ಎಂದುಕೊಳ್ಳುವಾಗಲೇ, ಆಕೆಯ ಕನಸುಗಳು ಕೇವಲ ಒಂದು ವರ್ಷದ ನಂತರ ಪಾಳು ಕಾಡಿನಲ್ಲಿ ಅನಾಥ ಸೂಟ್‌ಕೇಸ್‌ನೊಳಗೆ ಅಸ್ಥಿಪಂಜರವಾಗಿ ಪತ್ತೆಯಾಗುತ್ತವೆ ಎಂದು ಆ ಜೀವ ಕನಸಿನಲ್ಲೂ ಎಣಿಸಿರಲಿಲ್ಲ!

ಮಾನವೀಯತೆ ಮರೆತ ರಾಕ್ಷಸೀ ಕೃತ್ಯ

ಕಳೆದ ವರ್ಷದ ಮೇ 18ರಂದು ಪಿಜಿಯಲ್ಲಿದ್ದ ಗಂಗಾನಾಯ್ಕ, ಸೌಭಾಗ್ಯ ಹಾಗೂ ರಂಜಿತಾ ಜೊತೆ ಸಣ್ಣದೊಂದು ಗಲಾಟೆ ನಡೆದಿತ್ತು. ಇದೇ ಮನಸ್ತಾಪದಲ್ಲಿ ಸಂಗೀತಾ ಬಾತ್‌ರೂಮ್‌ನಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಆದರೆ, ಇಲ್ಲಿಂದ ಶುರುವಾಗಿದ್ದು ಮನುಷ್ಯತ್ವವೇ ತಲೆತಗ್ಗಿಸುವಂತಹ ಕಠೋರ ಕೃತ್ಯ. ತಮ್ಮ ಪಿಜಿಗೆ ಕೆಟ್ಟ ಹೆಸರು ಬರುತ್ತದೆ, ಪೊಲೀಸ್ ಕೇಸ್ ಆಗುತ್ತದೆ ಎಂಬ ಒಂದೇ ಕಾರಣಕ್ಕೆ, ಆ ಪಾಪಿಗಳು ಕನಿಷ್ಠ ಮಾನವೀಯತೆಯನ್ನೂ ತೋರಲಿಲ್ಲ. ಬಾಲಕಿಯ ಶವವನ್ನು ಯಾರಿಗೂ ಕಾಣದಂತೆ ಒಂದು ಸೂಟ್‌ಕೇಸ್‌ನಲ್ಲಿ ತುರುಕಿದರು. ರಾತ್ರೋರಾತ್ರಿ ಕಾರಿನಲ್ಲಿ ಕೊಂಡೊಯ್ದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸಮೀಪದ ಮಾವಿನಗುಂಡಿ ಅರಣ್ಯದ ಪ್ರಪಾತಕ್ಕೆ ಬಿಸಾಡಿ ಬಂದಿದ್ದರು.

ಪಾಪದ ಕೊಡ ತುಂಬಿತು, ರಹಸ್ಯ ಬೀದಿಗೆ ಬಂತು!

ಮಾಡಿದ ಪಾಪ ಎಂದಿಗೂ ಮರೆಯಾಗುವುದಿಲ್ಲ. ಕಳೆದ ಒಂದು ವರ್ಷದಿಂದ ಮಣ್ಣಾಗಿದ್ದ ಈ ಘೋರ ರಹಸ್ಯ, ಇತ್ತೀಚೆಗೆ ಆರೋಪಿಗಳಾದ ರಂಜಿತಾ ಹಾಗೂ ಪೀರ್ಯಾನಾಯ್ಕ ನಡುವೆ ನಡೆದ ವೈಯಕ್ತಿಕ ಜಗಳದಿಂದಾಗಿ ಬೀದಿಗೆ ಬಂತು! ಜಗಳದ ವೇಳೆ ಕೊಲೆಯ ಸತ್ಯಾಂಶ ಹೊರಬೀಳುತ್ತಿದ್ದಂತೆ, ಶುಕ್ರವಾರ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಯಿತು. ಶಿವಮೊಗ್ಗ ಎಸ್ಪಿ ಬಿ. ನಿಖಿಲ್ ನೇತೃತ್ವದಲ್ಲಿ ಪೊಲೀಸರು ರಂಜಿತಾಳನ್ನು ವಶಕ್ಕೆ ಪಡೆದು ಬೆವರಿಳಿಸಿದಾಗ ಅಸಲಿ ಕಹಾನಿ ಬಿಚ್ಚಿಬಿದ್ದಿದೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಪ್ರಕರಣದ ಪ್ರಮುಖ ರೂವಾರಿ, ಮುದ್ದನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಗಂಗಾನಾಯ್ಕ, ಆತನ ಎರಡನೇ ಪತ್ನಿ ಸೌಭಾಗ್ಯ, ರಂಜಿತಾ ಮತ್ತು ಪೀರ್ಯಾನಾಯ್ಕ ಸೇರಿ ನಾಲ್ವರನ್ನೂ ಹೆಡೆಮುರಿ ಕಟ್ಟಿದ್ದಾರೆ.

ಕಾಡಿನಲ್ಲಿ ಕರಗಿದ ದೇಹ

ಪೊಲೀಸರು ಆರೋಪಿಗಳನ್ನು ಕರೆದೊಯ್ದು ಮಾವಿನಗುಂಡಿ ಪ್ರಪಾತದಲ್ಲಿ ಶೋಧ ನಡೆಸಿದಾಗ ಸಿಕ್ಕಿದ್ದು ಕೇವಲ ಮೂಳೆಗಳು ಹಾಗೂ ತಲೆಬುರುಡೆ ಮಾತ್ರ. ಅನಾಥೆಯಾಗಿದ್ದ ಆಕೆಗೆ ಸಮಾಜ ರಕ್ಷಣೆ ನೀಡಬೇಕಿತ್ತು. ತಪ್ಪು ಯಾರದ್ದೇ ಇರಲಿ, ಒಂದು ಜೀವ ಹೋದಾಗ ಅದನ್ನು ಮುಚ್ಚಿಡಲು ಹೋದ ಈ ಕೃತ್ಯ ನಿಜಕ್ಕೂ ಅಮಾನವೀಯ. ಬದುಕಿ ಸಾಧಿಸಬೇಕಿದ್ದ ಜೀವವೊಂದು ಇಂದು ಕಾಡಿನಲ್ಲಿ ಕರಗಿ ಹೋಗಿದೆ. ಈ ಕೃತ್ಯವೆಸಗಿದವರಿಗೆ ತಕ್ಕ ಶಾಸ್ತಿಯಾಗಲೇಬೇಕು ಎಂಬುದು ಸಮಾಜದ ಆಗ್ರಹ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

4 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

18 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

20 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

20 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

20 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago