ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು
22-year-old outsourcing employee of Shivamogga Central Library, Bhuvan Singh, allegedly died by at his residence near Sigehatti. Doddapete Police have registered a case and are investigating.
ಶಿವಮೊಗ್ಗ: ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ 22 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತ ಯುವಕನನ್ನು ಭುವನ್ ಸಿಂಗ್ (22) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗ ನಗರದ ಸೆಂಟ್ರಲ್ ಲೈಬ್ರರಿಯಲ್ಲಿ ಹೊರಗುತ್ತಿಗೆ (ಔಟ್ಸೋರ್ಸಿಂಗ್) ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಭುವನ್ ಸಿಂಗ್ ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…