ಹೊಟ್ಟೆ ನೋವಿನಿಂದ ಬೇಸತ್ತು ನೇಣು ಬಿಗಿದುಕೊಂಡು ಯುವಕ ಸಾವು
22-year-old outsourcing employee of Shivamogga Central Library, Bhuvan Singh, allegedly died by at his residence near Sigehatti. Doddapete Police have registered a case and are investigating.
ಶಿವಮೊಗ್ಗ: ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ 22 ವರ್ಷದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತ ಯುವಕನನ್ನು ಭುವನ್ ಸಿಂಗ್ (22) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗ ನಗರದ ಸೆಂಟ್ರಲ್ ಲೈಬ್ರರಿಯಲ್ಲಿ ಹೊರಗುತ್ತಿಗೆ (ಔಟ್ಸೋರ್ಸಿಂಗ್) ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಭುವನ್ ಸಿಂಗ್ ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…
ಶಂಕರಮಠ ರಸ್ತೆಯ ರಾಹುಲ್ ಹುಂಡೈ ಶೋರೂಮ್ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…