Categories: crime news

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station.

ಶಿವಮೊಗ್ಗ, ಜುಲೈ 5: ಎಕ್ಸ್‌ಪ್ರೆಸ್ ಬಸ್‌ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ ಖಾಸಗಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ ತಾಲೂಕಿನ ಮೇಲಿನ ಕುಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳಗಾದವರು ವಿಜಯ ಮೋಟಾರ್ಸ್ ಸಂಸ್ಥೆಯ ನಿರ್ವಾಹಕ ಲೋಕೇಶ್ ಡಿ.ಕೆ. (42) ಎಂದು ಗುರುತಿಸಲಾಗಿದೆ. ಅವರು ಚಾಲಕ ಮಂಜುನಾಥ್ ಅವರೊಂದಿಗೆ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದೂರಿನ ಪ್ರಕಾರ, ಈ ಎಕ್ಸ್‌ಪ್ರೆಸ್ ಬಸ್‌ಗೆ ಸವಳಂಗದಲ್ಲಿ ಮಾತ್ರ ಅಧಿಕೃತ ನಿಲುಗಡೆ ಇದ್ದು, ಮೇಲಿನ ಕುಂಚೇನಹಳ್ಳಿಯಲ್ಲಿ ಬಸ್ ನಿಲ್ಲಿಸಲು ಅವಕಾಶವಿಲ್ಲ. ಗ್ರಾಮದ ನಿವಾಸಿ ಲೋಕೇಶ್ ನಾಯ್ಕ್ ಹಾಗೂ ಅವರ ಪತ್ನಿ ಕಳೆದ 15 ದಿನಗಳಿಂದ ತಮ್ಮ ಗ್ರಾಮದಲ್ಲಿ ಬಸ್ ನಿಲ್ಲಿಸುವಂತೆ ಒತ್ತಾಯಿಸುತ್ತಿದ್ದರು. ಆದರೆ, ನಿಲುಗಡೆ ಇಲ್ಲದ ಕಾರಣ ಸಾಧ್ಯವಿಲ್ಲ ಎಂದು ತಿಳಿಸಲಾಗಿತ್ತು. ಬದಲಾಗಿ, ಸುಮಾರು 10 ನಿಮಿಷ ಮೊದಲು ಬರುವ ಮತ್ತೊಂದು ಬಸ್‌ನಲ್ಲಿ ಪ್ರಯಾಣಿಸಲು ಬಸ್ ಸಿಬ್ಬಂದಿ ಹಾಗೂ ಮಾಲೀಕರು ಸಲಹೆ ನೀಡಿದ್ದರು.

ಮೊನ್ನೆ ಬೆಳಿಗ್ಗೆ ಬಸ್ ಮೇಲಿನ ಕುಂಚೇನಹಳ್ಳಿಗೆ ತಲುಪಿದ ವೇಳೆ ಲೋಕೇಶ್ ನಾಯ್ಕ್ ಹಾಗೂ 5 ರಿಂದ 6 ಮಂದಿ ಬಸ್‌ಗೆ ಅಡ್ಡಗಟ್ಟಿದ್ದಾರೆ ಎನ್ನಲಾಗಿದೆ. ಬಳಿಕ ಬಸ್ ಒಳಗೆ ನುಗ್ಗಿದ ಲೋಕೇಶ್ ನಾಯ್ಕ್, ನಿರ್ವಾಹಕ ಲೋಕೇಶ್ ಡಿ.ಕೆ. ಅವರ ಮೂಗಿಗೆ ಗುದ್ದಿ ಗಾಯಗೊಳಿಸಿದ್ದು, ತಲೆಯ ಹಿಂಭಾಗಕ್ಕೂ ಮುಷ್ಟಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದೇ ವೇಳೆ ಚಾಲಕ ಮಂಜುನಾಥ್ ಅವರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರು ಮಧ್ಯಪ್ರವೇಶಿಸಿ ಜಗಳವನ್ನು ಶಮನಗೊಳಿಸಿದ್ದಾರೆ. ಬಳಿಕ ಆರೋಪಿಗಳು ಚಾಲಕ ಹಾಗೂ ನಿರ್ವಾಹಕರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

7 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

7 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

7 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

9 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

13 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago