Categories: crime news

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು

A private travels manager in Shivamogga was allegedly cheated of ₹10 lakh after fraudsters lured him with fake gold chains, claiming they had discovered 3 kg of gold during trench work in Vijayawada.

ಶಿವಮೊಗ್ಗ, ಜುಲೈ 3: ವಿಜಯವಾಡದಲ್ಲಿ ಟೆಲಿಫೋನ್ ಕೇಬಲ್ ಅಳವಡಿಸುವ ವೇಳೆ ಮಣ್ಣಿನ ಮಡಿಕೆಯಲ್ಲಿ ಮೂರು ಕೆಜಿ ಚಿನ್ನದ ಸರಗಳು ಸಿಕ್ಕಿವೆ ಎಂದು ನಂಬಿಸಿ, ಶಿವಮೊಗ್ಗದ ಖಾಸಗಿ ಟ್ರಾವೆಲ್ಸ್ ಸಂಸ್ಥೆಯ ಮ್ಯಾನೇಜರ್‌ಗೆ ₹10 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, ಕಳೆದ ಮೇ 10ರಿಂದ 20ರ ಅವಧಿಯಲ್ಲಿ ಗಣೇಶ್ ಎಂಬಾತ ಮ್ಯಾನೇಜರ್ ಅವರನ್ನು ಸಂಪರ್ಕಿಸಿ, ವಿಜಯವಾಡದಲ್ಲಿ ಟ್ರೆಂಚ್ ತೋಡುವ ವೇಳೆ ಮಣ್ಣಿನ ಮಡಿಕೆಯಲ್ಲಿ ಸುಮಾರು ಮೂರು ಕೆಜಿ ಚಿನ್ನದ ಸರಗಳು ದೊರೆತಿವೆ ಎಂದು ಹೇಳಿದ್ದಾನೆ. ತುರ್ತು ಹಣದ ಅಗತ್ಯವಿರುವುದರಿಂದ ಕಡಿಮೆ ಬೆಲೆಗೆ ಚಿನ್ನ ಮಾರಾಟ ಮಾಡುವುದಾಗಿ ನಂಬಿಸಿದ್ದಾನೆ.

ಮೇ 20ರಂದು ಶಿವಮೊಗ್ಗದ ಹಳೇ ಮಂಡ್ಲಿ ಪ್ರದೇಶದಲ್ಲಿ ಮ್ಯಾನೇಜರ್ ಅವರನ್ನು ಭೇಟಿಯಾದ ಗಣೇಶ್ ಹಾಗೂ ಆತನ ಇಬ್ಬರು ಸಹಚರರು ಎರಡು ಗ್ರಾಂ ತೂಕದ ಚಿನ್ನದ ಮಣಿಯನ್ನು ಮಾದರಿಯಾಗಿ ನೀಡಿದ್ದಾರೆ. ಅದನ್ನು ಪರೀಕ್ಷಿಸಿದಾಗ ಅದು ಅಸಲಿ ಚಿನ್ನವೆಂದು ದೃಢಪಟ್ಟಿದ್ದರಿಂದ ಆರೋಪಿಗಳ ಮೇಲೆ ಮ್ಯಾನೇಜರ್‌ಗೆ ನಂಬಿಕೆ ಬಂದಿದೆ.

ನಂತರ ತಮ್ಮ ಬಳಿ ಸದ್ಯ ₹10 ಲಕ್ಷ ಇರುವುದಾಗಿ ಮ್ಯಾನೇಜರ್ ತಿಳಿಸಿದ್ದು, ಅದಕ್ಕೆ ಪ್ರತಿಯಾಗಿ 1.5 ಕೆಜಿ ಚಿನ್ನ ನೀಡುವುದಾಗಿ ಆರೋಪಿಗಳು ಒಪ್ಪಂದ ಮಾಡಿಕೊಂಡಿದ್ದಾರೆ. ಒಪ್ಪಂದದಂತೆ ಹಳೇ ಮಂಡ್ಲಿ ಪ್ರದೇಶದಲ್ಲಿ ಹಣ ಪಡೆದು, ಚಿನ್ನವಿದೆ ಎಂದು ಹೇಳಿ ನೀಲಿ ಬಣ್ಣದ ಕವರ್‌ನ್ನು ನೀಡಿದ್ದಾರೆ.

ಆದರೆ ಮನೆಗೆ ಬಂದು ಕವರ್ ತೆರೆದು ನೋಡಿದಾಗ ಅದರಲ್ಲಿದ್ದ ಚಿನ್ನದ ಸರಗಳು ನಕಲಿ ಎಂಬುದು ತಿಳಿದುಬಂದಿದೆ. ವಂಚನೆಗೊಳಗಾದಿರುವುದು ಖಚಿತವಾದ ಬಳಿಕ ಮ್ಯಾನೇಜರ್ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 hour ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

14 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

14 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

14 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

16 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

20 hours ago