ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ
A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation.
ಶಿವಮೊಗ್ಗ: ನಕಲಿ ಚಿನ್ನಾಭರಣಗಳನ್ನು ಅಸಲಿ ಚಿನ್ನವೆಂದು ನಂಬಿಸಿ ವಿವಿಧ ಬ್ಯಾಂಕ್ಗಳು ಹಾಗೂ ಸಹಕಾರ ಸಂಘಗಳಲ್ಲಿ ಅಡಮಾನ ಇಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸುತ್ತಿದ್ದ ಬೃಹತ್ ಜಾಲವನ್ನು ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನೂ ಹಲವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಸುಮಾರು 300 ಗ್ರಾಂ ನಕಲಿ ಚಿನ್ನಾಭರಣಗಳನ್ನು 15ಕ್ಕೂ ಹೆಚ್ಚು ಬ್ಯಾಂಕ್ಗಳು ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಡಮಾನ ಇಟ್ಟು, ₹30 ಲಕ್ಷಕ್ಕೂ ಅಧಿಕ ಸಾಲ ಪಡೆದು ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ.
ಈ ಪ್ರಕರಣ ಮೊದಲು ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ದಾಖಲಾಗಿತ್ತು. ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಸುಮಾರು ₹7.35 ಲಕ್ಷ ಸಾಲ ಪಡೆದು ವಂಚಿಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ದೊಡ್ಡಪೇಟೆ ಪೊಲೀಸರು, ಇದೇ ರೀತಿಯ ವಂಚನೆ ಹಲವು ಬ್ಯಾಂಕ್ಗಳು ಹಾಗೂ ಸಹಕಾರ ಸಂಘಗಳಲ್ಲಿ ನಡೆದಿರುವುದನ್ನು ಪತ್ತೆಹಚ್ಚಿದ್ದಾರೆ.
ತನಿಖೆಯಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್, ಶ್ರೀ ಸುವರ್ಣ ಸಹಕಾರ ಸಂಘ ಹಾಗೂ ತೀರ್ಥಹಳ್ಳಿಯ ಸುವರ್ಣ ವರ್ತಕರ ಸಂಘ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಸಂಸ್ಥೆಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡಮಾನ ಇಟ್ಟಿರುವುದು ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲೂಕಿನ ಟಿಪ್ಪರ್ ಲಾರಿ ಚಾಲಕ ಲೋಕೇಶ್ ಎಂಬಾತನನ್ನು ಬಂಧಿಸಲಾಗಿದೆ. ಈ ವಂಚನಾ ಜಾಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾದ ಸುಧಾ, ರಾಹುಲ್ ಸೇರಿದಂತೆ ಇತರ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬಂಧಿತ ಆರೋಪಿಯಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಇನ್ನೂ ಹಲವು ಬ್ಯಾಂಕ್ಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಇದೇ ರೀತಿಯಲ್ಲಿ ವಂಚನೆ ನಡೆಸಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…