ವಿಮಾನ ಟಿಕೆಟ್ ಬುಕ್ ಮಾಡಿಸುವ ನೆಪದಲ್ಲಿ ₹11.09 ಲಕ್ಷ ವಂಚನೆ | ಶಿವಮೊಗ್ಗದಲ್ಲಿ ಸೈಬರ್ ವಂಚನೆ ಜಾಲ ಬಯಲು

ವಿಮಾನ ಟಿಕೆಟ್ ಬುಕ್ ಮಾಡಿಸುವ ನೆಪದಲ್ಲಿ ₹11.09 ಲಕ್ಷ ವಂಚನೆ | ಶಿವಮೊಗ್ಗದಲ್ಲಿ ಸೈಬರ್ ವಂಚನೆ ಜಾಲ ಬಯಲು

A Shivamogga resident was allegedly cheated of ₹11.09 lakh by fraudsters posing as airline ticket booking agents. A case has been registered at the CEN Police Station.

ಶಿವಮೊಗ್ಗ: ವಿಮಾನ ಟಿಕೆಟ್ ಕಾಯ್ದಿರಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹11.09 ಲಕ್ಷ ಹಣ ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶಿವಮೊಗ್ಗ ನಗರದ ಸಿ.ಇ.ಎನ್ (ಸೈಬರ್, ಆರ್ಥಿಕ ಮತ್ತು ಮಾದಕ ಅಪರಾಧ) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ದೂರಿನ ಪ್ರಕಾರ, ಆರೋಪಿಗಳು ತಮ್ಮನ್ನು “ಶ್ರೀ ಭಾಗ್ಯವಂತಿ ಮಲ್ಟಿ ಬಿಸಿನೆಸ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡು, ತಮ್ಮ ಸಂಸ್ಥೆಯ ಮೂಲಕ ಸುಲಭವಾಗಿ ವಿಮಾನ ಟಿಕೆಟ್ ಕಾಯ್ದಿರಿಸಬಹುದು ಎಂದು ನಂಬಿಸಿದ್ದರು.

ನಂತರ ದೂರುದಾರರಿಂದ ವೈಯಕ್ತಿಕ ಮಾಹಿತಿ ಪಡೆದು, ನೋಂದಣಿ ಶುಲ್ಕದ ಹೆಸರಿನಲ್ಲಿ ಮೊದಲಿಗೆ ₹59,000 ಹಣವನ್ನು ವರ್ಗಾಯಿಸಿಕೊಂಡಿದ್ದಾರೆ. ಬಳಿಕ ವಿವಿಧ ಕಾರಣಗಳನ್ನು ನೀಡಿ ಹಂತ ಹಂತವಾಗಿ ಹಣ ಪಾವತಿಸುವಂತೆ ಹೇಳಿ, ದೂರುದಾರರು, ಅವರ ಪತ್ನಿ ಹಾಗೂ ಮಗನ ಬ್ಯಾಂಕ್ ಖಾತೆಗಳಿಂದ ಒಟ್ಟು ₹11,09,000 ಅನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.

ಇಷ್ಟೊಂದು ಹಣ ಪಡೆದಿದ್ದರೂ ಆರೋಪಿಗಳು ಯಾವುದೇ ವಿಮಾನ ಟಿಕೆಟ್ ಕಾಯ್ದಿರಿಸಿಕೊಡದೇ ವಂಚಿಸಿದ್ದಾರೆ ಎನ್ನಲಾಗಿದೆ. ಬಳಿಕ ದೂರುದಾರರು ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ, ಇನ್ನೂ ₹4 ಲಕ್ಷ ಪಾವತಿಸಿದರೆ ಮಾತ್ರ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದು ಹೇಳಿ ಮತ್ತಷ್ಟು ಹಣ ವಸೂಲಿ ಮಾಡಲು ಯತ್ನಿಸಿದ್ದಾರೆ.

ಈವರೆಗೆ ಹಣವನ್ನೂ ಹಿಂತಿರುಗಿಸದೇ, ಟಿಕೆಟ್‌ಗಳನ್ನೂ ನೀಡದೇ ಮೋಸ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

13 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

14 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

14 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

15 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

2 days ago