ಮಾಜಿ ಸಚಿವರ ಆಪ್ತನೆಂದು ಪರಿಚಯ; ಉದ್ಯಮಿಗೆ ಲಕ್ಷಾಂತರ ರೂ. ವಂಚನೆ

ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಎಂದು  ಹೇಳಿ ₹7.50 ಲಕ್ಷ ಪಡೆದು ವಂಚನೆ

A fraud case has been registered in Shivamogga after a man allegedly posing as a former minister’s personal secretary cheated a businessman of ₹7.50 lakh by promising a ₹1.45 crore government loan under an interest subsidy scheme.

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಡಿ ರಿಯಾಯಿತಿ ದರದಲ್ಲಿ ಸರ್ಕಾರಿ ಸಾಲ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಒಟ್ಟು ₹7.50 ಲಕ್ಷ ಪಡೆದು ವಂಚಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ತುಮಕೂರು ಮೂಲದ ವ್ಯಕ್ತಿಯೊಬ್ಬ ತಾನು ಮಾಜಿ ಸಚಿವರೊಬ್ಬರ ಆಪ್ತ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದನು. ತನಗೆ ಹಿರಿಯ ನಾಯಕರು ಹಾಗೂ ಅಧಿಕಾರಿಗಳ ಪರಿಚಯವಿದ್ದು, ಸಮಾಜ ಕಲ್ಯಾಣ ಇಲಾಖೆಯ ಇಂಟರೆಸ್ಟ್ ಸಬ್ಸಿಡಿ ಸ್ಕೀಮ್ ಅಡಿಯಲ್ಲಿ ₹1.45 ಕೋಟಿ ಸಾಲ ಮಂಜೂರು ಮಾಡಿಸಿಕೊಡುವುದಾಗಿ ನಂಬಿಸಿದ್ದ. ಸಾಲದ ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವ ಅಗತ್ಯವಿಲ್ಲ ಎಂದು ಉದ್ಯಮಿಗೆ ತಿಳಿಸಿದ್ದ.

ಸಾಲ ಮಂಜೂರಾತಿಗೆ ಅಧಿಕಾರಿಗಳಿಗೆ ನೀಡಬೇಕೆಂದು ಹೇಳಿ ಶಿವಮೊಗ್ಗದ ಉದ್ಯಮಿಯ ಅಂಗಡಿಯಲ್ಲಿ ಹಂತ ಹಂತವಾಗಿ ₹1,05,200 ನಗದಾಗಿ ಪಡೆದಿದ್ದನು. ನಂತರ 2025ರ ಆಗಸ್ಟ್‌ನಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ಆನ್‌ಲೈನ್ ಮೂಲಕ ₹6,44,800 ಸೇರಿ ಒಟ್ಟು ₹7.50 ಲಕ್ಷ ಹಣವನ್ನು ಪಡೆದುಕೊಂಡಿದ್ದನು ಎಂದು ಆರೋಪಿಸಲಾಗಿದೆ.

ಹಣ ಪಡೆದ ಬಳಿಕ ಸಾಲದ ಮೊತ್ತ ಖಾತೆಗೆ ಜಮಾ ಸಾಲ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಆಗುತ್ತದೆ ಎಂದು ಸುಳ್ಳು ಹೇಳುತ್ತಾ ಉದ್ಯಮಿಯ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ, ಇದೇ ರೀತಿ ಉದ್ಯಮಿಯ ಪರಿಚಿತರು ಹಾಗೂ ಸ್ನೇಹಿತರಿಗೂ ವಂಚಿಸಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

23 hours ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

23 hours ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

1 day ago