Categories: crime news

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

Shivamogga police arrested a couple for allegedly cheating job aspirants of over ₹2 crore by promising government jobs and issuing fake appointment letters using forged government documents.

ಶಿವಮೊಗ್ಗ, ಜುಲೈ 3: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಆರೋಪದ ಮೇಲೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದ ನಿವಾಸಿಗಳಾದ ಸಚಿನ್ ಹಾಗೂ ಸುಜಾತ ಎಂದು ಗುರುತಿಸಲಾಗಿದೆ.

ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ಶಿವಮೊಗ್ಗದಲ್ಲಿ ಹೈಟೆಕ್ ಉದ್ಯೋಗ ತರಬೇತಿ ಕೇಂದ್ರ ಆರಂಭಿಸಿ, ಸರ್ಕಾರಿ ಉದ್ಯೋಗ ಪಡೆಯಲು ವಿಶೇಷ ಮಾರ್ಗದರ್ಶನ ನೀಡುವುದಾಗಿ ನಂಬಿಕೆ ಮೂಡಿಸುತ್ತಿದ್ದರು. ಬಳಿಕ ಶಿವಮೊಗ್ಗ ಮಾತ್ರವಲ್ಲದೆ ಹಾಸನ, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸಿ ಹಣ ಪಡೆದುಕೊಂಡಿದ್ದಾರೆ.

ಉದ್ಯೋಗದ ಭರವಸೆಗೆ ಮರುಳಾದ ಅಭ್ಯರ್ಥಿಗಳಿಂದ ಕನಿಷ್ಠ ₹3.5 ಲಕ್ಷದಿಂದ ₹10 ಲಕ್ಷದವರೆಗೆ ಹಣ ಸಂಗ್ರಹಿಸಲಾಗಿದ್ದು, 50ಕ್ಕೂ ಹೆಚ್ಚು ಮಂದಿಗೆ ನಕಲಿ ನೇಮಕಾತಿ ಆದೇಶಗಳನ್ನು ನೀಡಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಒಟ್ಟು ವಂಚನೆಯ ಮೊತ್ತ ₹2 ಕೋಟಿಗೂ ಅಧಿಕ ಇರಬಹುದೆಂದು ಅಂದಾಜಿಸಲಾಗಿದೆ.

ಆರೋಪಿ ಸಚಿನ್ ತನ್ನ ತರಬೇತಿ ಕೇಂದ್ರದಲ್ಲೇ ಪರೀಕ್ಷೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ನಕಲಿ ಲೆಟರ್‌ಹೆಡ್, ಸೀಲು ಹಾಗೂ ದಾಖಲೆಗಳನ್ನು ಬಳಸಿ ಉದ್ಯೋಗ ದೊರೆತಿರುವಂತೆ ನಕಲಿ ನೇಮಕಾತಿ ಪತ್ರಗಳನ್ನು ನೀಡುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ವಂಚನೆ ಬಹಿರಂಗವಾಗುತ್ತಿದ್ದಂತೆ ಸಂತ್ರಸ್ತರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಸಚಿನ್ ಮತ್ತು ಸುಜಾತರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

12 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

12 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

12 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

14 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

18 hours ago

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

2 days ago