ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆಗೆ ಅವಕಾಶ: ವಾಹನ ಮಾಲೀಕನಿಗೆ ₹25,000 ದಂಡ
Shivamogga court imposed a ₹25,000 fine on a bike owner for allowing a minor to ride a KTM Duke motorcycle in violation of the Motor Vehicles Act.
ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿ ಆದೇಶಿಸಿದೆ.
ನಗರದ ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಕೆಟಿಎಂ ಡ್ಯೂಕ್ ಬೈಕ್ನಲ್ಲಿ ಅಪ್ರಾಪ್ತ ಬಾಲಕನೊಬ್ಬ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದುದನ್ನು ಪೊಲೀಸರು ಗಮನಿಸಿ ತಡೆದರು.
ಪರಿಶೀಲನೆ ವೇಳೆ ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ ಅಪ್ರಾಪ್ತ ವಯಸ್ಕನಾಗಿರುವುದು ದೃಢಪಟ್ಟಿದೆ. ಇದರಿಂದ ವಾಹನದ ಮಾಲೀಕನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ನೋಟಿಸ್ ಜಾರಿ ಮಾಡಲಾಯಿತು.
ಬಳಿಕ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿರುವುದು ಕಾನೂನು ಉಲ್ಲಂಘನೆಯಾಗಿರುವುದರಿಂದ ವಾಹನದ ಮಾಲೀಕನಿಗೆ ₹25,000 ದಂಡ ವಿಧಿಸಿ ಆದೇಶಿಸಿದೆ.
ಪೊಲೀಸರು ಪೋಷಕರು ಹಾಗೂ ವಾಹನ ಮಾಲೀಕರು ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್