Categories: crime news

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್!

Shivamogga Encounter: Brutal Murder Accused Shot in the Leg After Attacking Police

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್!

Shivamogga police open fire on a 28-year-old murder accused early Thursday morning after he assaulted a police constable with a machete to evade arrest. Read the full details of the operation

​ಶಿವಮೊಗ್ಗ: ನಗರದಲ್ಲಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವ ಕಾರ್ಯಾಚರಣೆ ವೇಳೆ ಪೊಲೀಸರು ಹಾಗೂ ಆರೋಪಿ ನಡುವೆ ಹೈಡ್ರಾಮಾ ನಡೆದಿದೆ.ಬಂಧಿಸಲು ಹೋದ ಪೊಲೀಸರ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.

​ಘಟನೆಯ ಸಂಪೂರ್ಣ ವಿವರ ಇಲ್ಲಿದೆ:

​ಗುಂಡೇಟು ತಿಂದ ಆರೋಪಿ: ಕಿಶೋರ್ (28). ಈತ ಬುಧವಾರವಷ್ಟೇ ಮಿಳಘಟ್ಟದ ನಿವಾಸಿ 65 ವರ್ಷದ ಸುಶೀಲಮ್ಮ ಎಂಬುವವರ ತಲೆಯ ಮೇಲೆ ಸೈಜುಗಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದನು.

​ಕಾರ್ಯಾಚರಣೆ ನಡೆದದ್ದು ಹೇಗೆ?:
ಆರೋಪಿ ಕಿಶೋರ್ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ವಾಜಪೇಯಿ ಲೇಔಟ್‌ನಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಗುರುವಾರ ಮುಂಜಾನೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ವೈ. ಅವರ ನೇತೃತ್ವದ ಪೊಲೀಸ್ ತಂಡ ಆರೋಪಿಯ ಬಂಧನಕ್ಕಾಗಿ ಕ್ಷಿಪ್ರ ದಾಳಿ ನಡೆಸಿತ್ತು.

ಪೊಲೀಸರು ಸುತ್ತುವರಿಯುತ್ತಿದ್ದಂತೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಿಶೋರ್, ಪೊಲೀಸ್ ಸಿಬ್ಬಂದಿ ಗಣೇಶ್ ಅವರ ಮೇಲೆ ಲಾಂಗ್‌ನಿಂದ (ಮಚ್ಚು) ದಿಢೀರ್ ಹಲ್ಲೆ ನಡೆಸಿದ್ದಾನೆ.

​ಆತ್ಮರಕ್ಷಣೆಗಾಗಿ ಫೈರಿಂಗ್:

ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದನ್ನು ಅರಿತ ಇನ್ಸ್‌ಪೆಕ್ಟ‌ರ್ ಸತ್ಯನಾರಾಯಣ್ ಅವರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೂ ಆತ ಮಣಿಯದಿದ್ದಾಗ, ಸಿಬ್ಬಂದಿಯ ಪ್ರಾಣರಕ್ಷಣೆ ಹಾಗೂ ಆತ್ಮರಕ್ಷಣೆಗಾಗಿ ನೇರವಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ಆರೋಪಿ ಕಿಶೋರ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯದ ವೇಳೆ ಆರೋಪಿಯ ದಾಳಿಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಅವರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

​ಘಟನೆ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿ. ನಿಖಿಲ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದಾರೆ.

ವೃದ್ಧೆಯ ಬರ್ಬರ ಹತ್ಯೆಯಿಂದ ಬೆಚ್ಚಿಬಿದ್ದಿದ್ದ ಶಿವಮೊಗ್ಗದ ಜನತೆಗೆ, ಆರೋಪಿಯನ್ನು 24 ಗಂಟೆಯೊಳಗೆ ಬೇಟೆಯಾಡಿದ ಪೊಲೀಸರ ಈ ಕಾರ್ಯಾಚರಣೆ ಸಾರ್ವಜನಿಕರ ಪ್ರಶಂಸೆಗೆ ಒಳಗಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

18 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

18 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

20 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

21 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

1 day ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

1 day ago