ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಎಸ್‌ಪಿ ನಿಖಿಲ್ ಭೇಟಿ : ಕಾರ್ಯವೈಖರಿ ಪರಿಶೀಲನೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಎಸ್‌ಪಿ ನಿಖಿಲ್ ಭೇಟಿ : ಕಾರ್ಯವೈಖರಿ ಪರಿಶೀಲನೆ

Shivamogga SP B. Nikhil visited Ripponpet Police Station on Friday to inspect police functioning, review pending cases, assess public grievance handling, and issue key instructions to officers for effective law enforcement.

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿ. ನಿಖಿಲ್ ಅವರು ಶುಕ್ರವಾರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯ ಕಾರ್ಯವೈಖರಿಯನ್ನು ಸಮಗ್ರವಾಗಿ ಪರಿಶೀಲಿಸಿದರು.

ಪರಿಶೀಲನೆ ವೇಳೆ ಠಾಣೆಯ ದೈನಂದಿನ ಆಡಳಿತಾತ್ಮಕ ಕಾರ್ಯಗಳು, ಕಾನೂನು ಸುವ್ಯವಸ್ಥೆ ನಿರ್ವಹಣೆ ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆ ಕುರಿತು ಎಸ್‌ಪಿ ಮಾಹಿತಿ ಪಡೆದರು. ಸಾರ್ವಜನಿಕರಿಂದ ಸಲ್ಲಿಕೆಯಾಗುವ ದೂರುಗಳಿಗೆ ಠಾಣೆಯಲ್ಲಿ ಯಾವ ರೀತಿಯಲ್ಲಿ ಸ್ಪಂದಿಸಲಾಗುತ್ತಿದೆ ಎಂಬುದನ್ನು ಪರಿಶೀಲಿಸಿದ ಅವರು, ನಾಗರಿಕ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.

ಇದೇ ವೇಳೆ ಠಾಣೆಯ ದಾಖಲೆಗಳಾದ ಎಫ್‌ಐಆರ್‌ಗಳು, ಅಪರಾಧ ಪ್ರಕರಣಗಳ ದಾಖಲಾತಿ, ಠಾಣಾ ಡೈರಿ, ವಿವಿಧ ರಿಜಿಸ್ಟರ್‌ಗಳು ಹಾಗೂ ತನಿಖೆಯಲ್ಲಿರುವ ಪ್ರಕರಣಗಳ ಪ್ರಗತಿಯನ್ನು ಪರಿಶೀಲಿಸಿದರು. ಬೀಟ್ ಸಿಬ್ಬಂದಿಯ ಕಾರ್ಯವೈಖರಿ, ರೌಡಿ ಶೀಟರ್‌ಗಳ ಮೇಲಿನ ನಿಗಾ, ಠಾಣೆಯಲ್ಲಿರುವ ಶಸ್ತ್ರಾಸ್ತ್ರಗಳು, ವಾಹನಗಳು ಹಾಗೂ ವಶಪಡಿಸಿಕೊಂಡ ಮಾಲುಗಳ ನಿರ್ವಹಣೆ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆಗಳನ್ನು ನೀಡಿದರು.

ಠಾಣೆಯ ಆವರಣ, ಕಚೇರಿ ಕೊಠಡಿಗಳು ಹಾಗೂ ಲಾಕಪ್‌ಗಳ ಸ್ವಚ್ಛತೆಯನ್ನು ಪರಿಶೀಲಿಸಿದ ಎಸ್‌ಪಿ, ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿ ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಿಬ್ಬಂದಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಿದ ಅವರು, ಠಾಣೆಗೆ ಬರುವ ಸಾರ್ವಜನಿಕರು ಹಾಗೂ ದೂರುದಾರರೊಂದಿಗೆ ಸೌಜನ್ಯ ಮತ್ತು ಗೌರವದಿಂದ ವರ್ತಿಸಬೇಕು ಎಂದು ತಿಳಿಸಿದರು. ಬಾಕಿ ಉಳಿದಿರುವ ಹಳೆಯ ಪ್ರಕರಣಗಳ ತನಿಖೆಯನ್ನು ತ್ವರಿತಗೊಳಿಸಿ ಇತ್ಯರ್ಥಪಡಿಸಬೇಕು. ರಾತ್ರಿ ಗಸ್ತು ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಮೂಲಕ ಕಳ್ಳತನ ಸೇರಿದಂತೆ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವಂತೆ ನಿರ್ದೇಶಿಸಿದರು. ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರ ದೂರುಗಳಿಗೆ ಮೊದಲ ಆದ್ಯತೆ ನೀಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಗೌಡಪ್ಪ ಗೌಡರ್ ಹಾಗೂ ಪೊಲೀಸ್ ಉಪನಿರೀಕ್ಷಕ (ಪಿಎಸ್‌ಐ) ರಾಜುರೆಡ್ಡಿ ಸೇರಿದಂತೆ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

7 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

1 day ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago