ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು.!?

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು!?

Two accused have been arrested in connection with the murder of a labourer in Sonale, Shivamogga district. SP Nikhil briefed the media on the investigation, motive, and the arrests made by the police.

​ಶಿವಮೊಗ್ಗ: ಹೆಂಡತಿಯೊಂದಿಗೆ ಸೇರಿ ಬಾಳುವಂತೆ ಬುದ್ಧಿವಾದ ಹೇಳಿದ ಸಹೋದ್ಯೋಗಿಯನ್ನೇ ಚಾಕುವಿನಿಂದ ಇರಿದು ಕೊಂದ ಭೀಕರ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದಿತ್ತು ಕೂಡಲೇ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ  ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ತಿಳಿಸಿದ್ದಾರೆ.

ಎಸ್ ಪಿ ನಿಖಿಲ್ ಹೇಳಿದ್ದೇನು .!?

​ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಈಚನಳ್ಳಿ ತಾಂಡಾದ ನಿವಾಸಿಗಳಾದ ಪರಶುರಾಮ್ (ಮೃತ), ಹಾಗೂ ಆರೋಪಿಗಳಾದ ಪರಶುರಾಮ್ ಮತ್ತು ಅರುಣ್ ಹೊಸನಗರದ ಸೊನಲೆ ಗ್ರಾಮಕ್ಕೆ ಗಾರೆ ಕೆಲಸಕ್ಕೆಂದು ಒಟ್ಟಾಗಿ ಬಂದಿದ್ದರು.

ಆರೋಪಿ ಅರುಣ್ ಕಳೆದ 10-12 ತಿಂಗಳುಗಳಿಂದ ತನ್ನ ಪತ್ನಿಯಿಂದ ಪ್ರತ್ಯೇಕವಾಗಿ ವಾಸವಿದ್ದ. ರಾತ್ರಿ ಕೆಲಸ ಮುಗಿಸಿ ಊಟ ಮಾಡುವಾಗ ಮದ್ಯದ ಅಮಲಿನಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಆಗ ವಯಸ್ಸಿನಲ್ಲಿ ಹಿರಿಯನಾಗಿದ್ದ ಮೃತ ಪರಶುರಾಮ್, “ಹೆಂಡತಿಯನ್ನು ಬಿಟ್ಟುಬಿಡುವುದು ಪರಿಹಾರವಲ್ಲ, ಕುಟುಂಬವನ್ನು ಒಟ್ಟಿಗೆ ಸಾಗಿಸಿಕೊಂಡು ಹೋಗಬೇಕು” ಎಂದು ಅರುಣ್ ಗೆ ಬುದ್ಧಿವಾದ ಹೇಳಿದ್ದಾರೆ.

ಈ ಹಿತವಚನವೇ ಆರೋಪಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಈ ವೇಳೆ ಕೋಪಗೊಂಡ ಅರುಣ್ ಹಾಗೂ ಮತ್ತೊಬ್ಬ ಆರೋಪಿ ಪರಶುರಾಮ್ ಸೇರಿ, ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪರಶುರಾಮ್ ಅವರ ಕುತ್ತಿಗೆಗೆ ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದರು.

ಘಟನೆ ನಡೆದ ತಕ್ಷಣ ಹೊಸನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೃತ ಪರಶುರಾಮ್ 15 ದಿನಗಳ ರಜೆಯ ಬಳಿಕ ಘಟನೆಯ ದಿನವಷ್ಟೇ ಕೆಲಸಕ್ಕೆ ವಾಪಸಾಗಿದ್ದರು. ಆರೋಪಿಗಳ ವಿರುದ್ಧ ಯಾವುದೇ ಹಳೆಯ ಕ್ರಿಮಿನಲ್ ಹಿನ್ನೆಲೆಗಳಿಲ್ಲ. ಇದು ಮದ್ಯದ ಅಮಲಿನಲ್ಲಿ ಹಾಗೂ ಕ್ಷಣಿಕ ಆವೇಶದಲ್ಲಿ ನಡೆದ ಕೃತ್ಯವೇ ಹೊರತು, ಪೂರ್ವನಿಯೋಜಿತ ಕೊಲೆಯಲ್ಲ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎನ್. ಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…

4 hours ago

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…

14 hours ago

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…

1 day ago

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…

1 day ago

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes…

1 day ago

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…

1 day ago