ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್
Agumbe PSI Shivanagowda Patil joined students of Honnetalu Government School in paddy transplantation and taught them practical farming skills during an agricultural study programme.
ಶಿವಮೊಗ್ಗ: ಶಾಲಾ ಮಕ್ಕಳೊಂದಿಗೆ ಖಾಕಿ ಸಮವಸ್ತ್ರದಲ್ಲೇ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡುವ ಮೂಲಕ ಆಗುಂಬೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಶಿವನಗೌಡ ಪಾಟೀಲ್ ಗಮನ ಸೆಳೆದಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಹೊನ್ನೇತಾಳು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಕೃಷಿ ಅಧ್ಯಯನ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ PSI ಶಿವನಗೌಡ ಪಾಟೀಲ್ ಅವರು, ಮಕ್ಕಳೊಂದಿಗೆ ಕೆಸರು ಗದ್ದೆಗೆ ಇಳಿದು ಹೂಟಿ ಹಾಗೂ ನಾಟಿ ಕಾರ್ಯದ ಪ್ರಾತ್ಯಕ್ಷಿಕೆ ನೀಡಿದರು.
ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜೊತೆಗೆ ಕೃಷಿಯ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಪ್ರತಿವರ್ಷ ಗದ್ದೆ ನಾಟಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಶಾಲೆಯ ಸಮೀಪದ ಭತ್ತದ ಗದ್ದೆಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ನಾಟಿ ಕಾರ್ಯದಲ್ಲಿ ಪಾಲ್ಗೊಂಡರು.
ಈ ವೇಳೆ ಪೊಲೀಸ್ ಅಧಿಕಾರಿ ಶಿವನಗೌಡ ಪಾಟೀಲ್ ಅವರು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿ, ಕೃಷಿಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಪೊಲೀಸ್ ಅಧಿಕಾರಿಯ ಸರಳತೆ ಹಾಗೂ ಮಕ್ಕಳೊಂದಿಗೆ ಬೆರೆತು ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿದ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಪ್ರಾಯೋಗಿಕ ಅನುಭವ ನೀಡುತ್ತಿರುವ ಶಾಲೆಯ ಶಿಕ್ಷಕರ ಪ್ರಯತ್ನಕ್ಕೂ ಶ್ಲಾಘನೆ ವ್ಯಕ್ತವಾಗಿದೆ.
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…