ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ
Shikaripura MLA B.Y. Vijayendra and MP B.Y. Raghavendra offered Bagina to Ambligola Reservoir after it filled up, bringing joy to farmers in the region.
ಶಿಕಾರಿಪುರ, ಆ.8: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಮತ್ತು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಶನಿವಾರ ರೈತರೊಂದಿಗೆ ಸೇರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಸಂದಿಗ್ಧ ಪರಿಸ್ಥಿತಿಯ ನಡುವೆಯೂ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದರು. ರೈತರ ಹಿತಾಸಕ್ತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಮಹತ್ವವನ್ನು ಅವರು ಒತ್ತಿ ಹೇಳಿದರು.
ಕಾರ್ಯಕ್ರಮದಲ್ಲಿ ಬಿ ವೈ ರಾಘವೇಂದ್ರ , ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತಪ್ಪ, ಕೆ.ಎಸ್. ಗುರುಮೂರ್ತಿ, ರೈತ ಮೋರ್ಚಾ ಅಧ್ಯಕ್ಷ ಸಿದ್ದಲಿಂಗಪ್ಪ ನಿಂಬೇಗೊಂದಿ, ಎಸ್.ಬಿ. ಮಠದ್, ಶೇಖರಪ್ಪ ಅಂಬಾರ್ಕಪ್ಪರ್, ರುದ್ರಮೂರ್ತಿ ಸಾಲೂರು, ರುದ್ರಮುನಿ ಚುರ್ಚಿಗುಂಡಿ, ಚೆನ್ನವೀರಪ್ಪ ಹಾಗೂ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹುಲ್ಮಾರ್ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…
ರಿಪ್ಪನ್ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…
ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…