ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ
Former Hosanagara MLA B. Swamirao criticizes the Karnataka Congress cabinet expansion, alleging injustice to women, Brahmins, and loyal senior legislators while favoring sons of former chief ministers.
ಹೊಸನಗರ, ಆ.4: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರು, ವಿಪ್ರ ಸಮುದಾಯ ಹಾಗೂ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಹಿರಿಯ ಶಾಸಕರಿಗೆ ಅನ್ಯಾಯವಾಗಿದೆ ಎಂದು ಹೊಸನಗರ ಕ್ಷೇತ್ರದ ಮಾಜಿ ಶಾಸಕ ಬಿ. ಸ್ವಾಮಿರಾವ್ ಆರೋಪಿಸಿದ್ದಾರೆ.
ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಹೆಚ್ಚು ಸಮಯ ತೆಗೆದುಕೊಂಡಿದ್ದರೂ, ಅಂತಿಮವಾಗಿ ಹಲವು ದಶಕಗಳಿಂದ ಪಕ್ಷಕ್ಕಾಗಿ ದುಡಿದ ನಾಯಕರನ್ನು ಕಡೆಗಣಿಸಿ, ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಟೀಕಿಸಿದರು.
ಪಕ್ಷದ ಹೈಕಮಾಂಡ್ ರಾಜ್ಯ ರಾಜಕಾರಣದಲ್ಲಿ ಪದೇಪದೇ ಹಸ್ತಕ್ಷೇಪ ಮಾಡುತ್ತಿರುವುದು ಸಂವಿಧಾನಬದ್ಧವಾಗಿ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಧಕ್ಕೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ವೈ.ಕೆ. ಗೋಪಾಲಕೃಷ್ಣ, ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ಪುತ್ರ ದಿನೇಶ್ ಗುಂಡೂರಾವ್, ಮೈಸೂರಿನ ತನ್ವೀರ್ ಸೇಠ್, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಸೇರಿದಂತೆ ಹಲವು ಹಿರಿಯ ಹಾಗೂ ಪ್ರಾಮಾಣಿಕ ನಾಯಕರಿಗೆ ಸಚಿವ ಸ್ಥಾನ ದೊರೆಯದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಸಚಿವರಿಲ್ಲದ ಸಚಿವ ಸಂಪುಟ ರಚನೆಯಾಗಿರುವುದು ಕಾಂಗ್ರೆಸ್ ಮಹಿಳೆಯರನ್ನು ಕಡೆಗಣಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಕೆಲವರಿಗೆ ಸಚಿವ ಸ್ಥಾನ ನೀಡಿರುವುದನ್ನು ಜನರು ಪ್ರಶ್ನಿಸುತ್ತಿದ್ದಾರೆ. ಹಲವು ಬಾರಿ ಗೆದ್ದ ಯುವ ಶಾಸಕರನ್ನೂ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಸಚಿವ ಸಂಪುಟದಿಂದ ದೂರವಿಡಲಾಗಿದೆ ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಪ್ರದೇಶವಾರು, ಜಾತಿವಾರು ಹಾಗೂ ಅಭಿವೃದ್ಧಿ ಆಧಾರಿತ ಸಮತೋಲನಕ್ಕೆ ಆದ್ಯತೆ ನೀಡಿದರೆ ಮಾತ್ರ ಡಿಕೆಶಿ ನೇತೃತ್ವದ ಸರ್ಕಾರ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯ ಎಂದು ಬಿ. ಸ್ವಾಮಿರಾವ್ ಅಭಿಪ್ರಾಯಪಟ್ಟರು.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…