ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ
Sagar MLA Beluru Gopalakrishna expresses strong dissatisfaction after being denied a ministerial berth in the Karnataka Cabinet and announces he will resign as MLA on August 4.
ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ನೂತನ 20 ಸಚಿವರ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಬಹಿರಂಗವಾಗತೊಡಗಿದೆ. ಈ ನಡುವೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಮತ್ತು ಪ್ರಭಾವಿ ನಾಯಕರಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.
“ನಾನು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆಗಾಗಿ ನಿರಂತರವಾಗಿ ದುಡಿದಿದ್ದರೂ ಸಚಿವ ಸ್ಥಾನ ನೀಡದೆ ನನಗೆ ಅನ್ಯಾಯ ಮಾಡಲಾಗಿದೆ. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರು ಹಾಗೂ ಹಿರಿಯ ನಾಯಕರಿಗಿಂತ ಪ್ರಭಾವಿ ಕುಟುಂಬಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ಹಿನ್ನೆಲೆಯಲ್ಲಿ ನಾಳೆ (ಆಗಸ್ಟ್ 4) ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಘೋಷಣೆ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ.
ಬೇಳೂರು ಗೋಪಾಲಕೃಷ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದೊಳಗೆ ಮತ್ತಷ್ಟು ರಾಜಕೀಯ ಚಟುವಟಿಕೆಗೆ ಕಾರಣವಾಗುವ ಸಾಧ್ಯತೆ ಇದೆ.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…