ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ
Sagar MLA Beluru Gopalakrishna withdraws his resignation decision after Chief Minister D.K. Shivakumar’s intervention, saying he will continue working for the Congress party despite missing a cabinet berth.
ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವೊಲಿಕೆ ಹಾಗೂ ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ಸಲ್ಲಿಸದಿರಲು ತೀರ್ಮಾನಿಸಿರುವುದಾಗಿ ಅವರು ತಿಳಿಸಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೇಳೂರು, ಸಚಿವ ಸ್ಥಾನ ಸಿಗದಿರುವುದು ತಮಗೆ ತೀವ್ರ ನೋವುಂಟು ಮಾಡಿದ್ದು, ಇದೇ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ಹೇಳಿದರು. ಈ ಬೆಳವಣಿಗೆಯಿಂದ ಕ್ಷೇತ್ರದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕೂಡ ನಿರಾಸೆಗೊಂಡಿದ್ದಾರೆ ಎಂದು ತಿಳಿಸಿದರು.
ರಾಜೀನಾಮೆ ನೀಡಲು ಸಿದ್ಧರಾಗಿದ್ದ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ ಸಂಪರ್ಕಿಸಿ ಭೇಟಿಗೆ ಆಹ್ವಾನಿಸಿದ್ದರು. ಬಳಿಕ ನಡೆದ ಮಾತುಕತೆಯಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಉಂಟಾಗಬಾರದು ಹಾಗೂ ಸರ್ಕಾರ ಮತ್ತು ಪಕ್ಷದ ಹಿತದೃಷ್ಟಿಯಿಂದ ಮುಂದುವರಿಯುವಂತೆ ಮುಖ್ಯಮಂತ್ರಿ ಮನವಿ ಮಾಡಿದರು. ಅವರ ಸಲಹೆಯನ್ನು ಗೌರವಿಸಿ ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ಬೇಳೂರು ಹೇಳಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಅಥವಾ ಪಕ್ಷದ ನಾಯಕರಿಂದ ಯಾವುದೇ ಭರವಸೆ ಅಥವಾ ಸ್ಥಾನಮಾನವನ್ನು ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ಸ್ಥಾನ ಕುರಿತ ಚರ್ಚೆ ಈಗ ಮುಗಿದ ಅಧ್ಯಾಯವಾಗಿದ್ದು, ಪಕ್ಷದ ಮೇಲಿನ ನಿಷ್ಠೆಯಿಂದ ಮುಂದೆಯೂ ಕಾರ್ಯಕರ್ತರೊಂದಿಗೆ ಸೇರಿ ಕಾಂಗ್ರೆಸ್ ಬಲವರ್ಧನೆಗಾಗಿ ಕೆಲಸ ಮಾಡುವುದಾಗಿ ಹೇಳಿದರು.
ಇದೇ ವೇಳೆ, ತಮ್ಮ ಬೆಂಬಲಿಗರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಮನವಿ ಮಾಡಿದ ಅವರು, ಕಳೆದ ಮೂರು ವರ್ಷಗಳಿಂದ ಯಾವುದೇ ಭಿನ್ನಮತವಿಲ್ಲದೆ ಪಕ್ಷಕ್ಕಾಗಿ ದುಡಿದಿದ್ದು, ಮುಂದೆಯೂ ಅದೇ ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…