ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

Farmers and agricultural workers will hold a padayatra and public meeting in Hosanagara on August 29 opposing the Kasturirangan report notification and proposed eco-sensitive zone.

ಶಿವಮೊಗ್ಗ: ರೈತರು ಹಾಗೂ ಕೃಷಿ ಕಾರ್ಮಿಕರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಆಗಸ್ಟ್ 29ರಂದು ಹೊಸನಗರದಲ್ಲಿ ಪಾದಯಾತ್ರೆ ಹಾಗೂ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆಯ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಪಾದಯಾತ್ರೆಯು ಬೆಳಿಗ್ಗೆ 9 ಗಂಟೆಗೆ ಕಾರಗಡಿಯ ಸಿದ್ಧಿವಿನಾಯಕ ದೇವಸ್ಥಾನದಿಂದ ಆರಂಭವಾಗಲಿದೆ. ಪಾದಯಾತ್ರೆ ಹೊಸನಗರ ತಲುಪಿದ ಬಳಿಕ ಬಹಿರಂಗ ಸಭೆ ನಡೆಯಲಿದೆ ಎಂದು ತಿಳಿಸಿದರು.


ಕಸ್ತೂರಿರಂಗನ್ ವರದಿಯ 7ನೇ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕದ ಸುಮಾರು 20,668 ಚದರ ಕಿ.ಮೀ. ಮಲೆನಾಡು ಪ್ರದೇಶದ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮವಲಯವೆಂದು ಘೋಷಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಅವರು ಹೇಳಿದರು.

ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಶಿಕಾರಿಪುರ ತಾಲ್ಲೂಕುಗಳ ಒಟ್ಟು 473 ಗ್ರಾಮಗಳನ್ನು ಪ್ರಸ್ತಾವಿತ ಸೂಕ್ಷ್ಮವಲಯಕ್ಕೆ ಸೇರಿಸಲಾಗಿದೆ. ಅಧಿಸೂಚನೆ ಜಾರಿಯಾದರೆ ಕಠಿಣ ಪರಿಸರ ಕಾಯ್ದೆಗಳಿಂದ ಗ್ರಾಮೀಣ ಜನಜೀವನ ಅಸ್ತವ್ಯಸ್ತವಾಗುವ ಆತಂಕವಿದೆ ಎಂದು ಮಂಜುನಾಥಗೌಡ ಹೇಳಿದರು.

ಇಡೀ ಗ್ರಾಮವನ್ನು ಸೂಕ್ಷ್ಮವಲಯಕ್ಕೆ ಸೇರಿಸುವುದಕ್ಕೆ ವಿರೋಧ

ಗ್ರಾಮಗಳ ವಸತಿ ಪ್ರದೇಶ, ಕೃಷಿಭೂಮಿ, ಪಟ್ಟಾಭೂಮಿ, ನೀರಿನ ಮೂಲಗಳು, ಗೋಮಾಳ, ಗ್ರಾಮ ರಸ್ತೆಗಳು ಸೇರಿದಂತೆ ವಿವಿಧ ಮೂಲಸೌಕರ್ಯ ಪ್ರದೇಶಗಳನ್ನು ಸೂಕ್ಷ್ಮವಲಯದಿಂದ ಹೊರಗಿಡದೆ ಇಡೀ ಗ್ರಾಮವನ್ನೇ ಸೂಕ್ಷ್ಮವಲಯವೆಂದು ಘೋಷಿಸುವ ಕ್ರಮ ಆತಂಕಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಗ್ರಾಮಸಭೆಗಳಲ್ಲಿ ಚರ್ಚಿಸದೆ ಹಾಗೂ ಗ್ರಾಮಸ್ಥರ ಅಭಿಪ್ರಾಯಗಳನ್ನು ಪರಿಗಣಿಸದೆ ಅಧಿಸೂಚನೆ ಹೊರಡಿಸಿರುವುದು ಸರಿಯಲ್ಲ. ಸೂಕ್ಷ್ಮವಲಯದ ಗಡಿ ಹಾಗೂ ಸರಹದ್ದನ್ನು ಆಯಾ ಗ್ರಾಮದ ಜನರೇ ಗುರುತಿಸುವಂತಾಗಬೇಕು ಮತ್ತು ಅದನ್ನು ಸರ್ಕಾರ ಒಪ್ಪಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ರೈತರಿಗೆ ಆತಂಕ

ಸೂಕ್ಷ್ಮವಲಯವೆಂದು ಗುರುತಿಸಲಾಗುತ್ತಿರುವ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಕೃಷಿ ಮಾಡುತ್ತಿರುವ ಸಾವಿರಾರು ರೈತ ಕುಟುಂಬಗಳಿಗೆ ಇನ್ನೂ ಹಕ್ಕುಪತ್ರ ದೊರೆತಿಲ್ಲ. ವಾಸವಿರುವ ಮನೆಗಳಿಗೂ ದಾಖಲೆಗಳು ಲಭ್ಯವಾಗಿಲ್ಲ.

ಅರ್ಜಿ ನಮೂನೆ 50, 53, 57 ಹಾಗೂ ಮನೆಗಳಿಗಾಗಿ 94C ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಂಜೂರಾತಿಗಾಗಿ ಕಾಯುತ್ತಿರುವ ಕುಟುಂಬಗಳು, ಸೂಕ್ಷ್ಮವಲಯ ಘೋಷಣೆಯಿಂದ ತಾವು ವಾಸಿಸುತ್ತಿರುವ ಹಾಗೂ ಕೃಷಿ ಮಾಡುತ್ತಿರುವ ಜಾಗದ ಮೇಲಿನ ಹಕ್ಕು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ಮಂಜುನಾಥಗೌಡ ಹೇಳಿದರು.

ತಾಲ್ಲೂಕುವಾರು ಬಾಧಿತ ಗ್ರಾಮಗಳು

ತೀರ್ಥಹಳ್ಳಿ: 146 ಗ್ರಾಮಗಳು
ಸಾಗರ: 126 ಗ್ರಾಮಗಳು
ಹೊಸನಗರ: 125 ಗ್ರಾಮಗಳು
ಶಿವಮೊಗ್ಗ: 64 ಗ್ರಾಮಗಳು
ಶಿಕಾರಿಪುರ: 12 ಗ್ರಾಮಗಳು

ಸೂಕ್ಷ್ಮವಲಯ ಘೋಷಣೆಯಿಂದ ಕೃಷಿ, ತೋಟಗಾರಿಕೆ ಅಭಿವೃದ್ಧಿ, ರಸ್ತೆ ಹಾಗೂ ಇತರೆ ಮೂಲಸೌಕರ್ಯಗಳ ಅಭಿವೃದ್ಧಿಗೂ ಅಡೆತಡೆ ಉಂಟಾಗುವ ಸಾಧ್ಯತೆ ಇದೆ. ರೈತರ ಬದುಕಿನ ಮೇಲೆ ಪರಿಣಾಮ ಬೀರುವ ಯಾವುದೇ ನಿರ್ಧಾರವು ಗ್ರಾಮಸ್ಥರ ಬದುಕಿಗೆ ಮಾರಕವಾಗಬಾರದು ಎಂದು ಅವರು ಹೇಳಿದರು.

ಸೂಕ್ಷ್ಮವಲಯದ ಗಡಿ ಅಂತಿಮಗೊಳ್ಳುವ ಮೊದಲು ಗ್ರಾಮಸಭೆ, ರೈತರು, ಸಹಕಾರಿ ಸಂಸ್ಥೆಗಳು ಹಾಗೂ ಸ್ಥಳೀಯ ತಜ್ಞರ ಭಾಗವಹಿಸುವಿಕೆಯನ್ನು ಸರ್ಕಾರ ಖಚಿತಪಡಿಸಬೇಕು ಎಂದು ಆರ್.ಎಂ. ಮಂಜುನಾಥಗೌಡ ಒತ್ತಾಯಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

9 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

11 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

11 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

12 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

12 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago