ಹೊಸನಗರ ತಾಲೂಕಿನಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಬಿಗ್ ಅಪ್‌ಡೇಟ್

ಹೊಸನಗರ ತಾಲೂಕಿನಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಬಿಗ್ ಅಪ್‌ಡೇಟ್

Big update on school and college holiday in Hosanagara Taluk. Holiday is likely only for Nagara Hobli due to heavy rainfall, while a final decision will be announced by the Tahsildar and BEO at 7 AM on August 3.

ಹೊಸನಗರ: ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳ ರಜೆ ಕುರಿತು ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ತಾಲೂಕಿನಾದ್ಯಂತ ಮಳೆಯ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ನಗರ ಹೋಬಳಿಯಲ್ಲಿ ಮಾತ್ರ ಮಳೆಯ ತೀವ್ರತೆ ಮುಂದುವರಿದಿದ್ದು, ರಿಪ್ಪನ್‌ಪೇಟೆ ಹಾಗೂ ಹೊಸನಗರ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ನಗರ ಹೋಬಳಿಗೆ ಮಾತ್ರ ರಜೆ ಘೋಷಿಸುವ ಸಾಧ್ಯತೆ ಇದೆ.

ಈ ಕುರಿತು ಪೋಸ್ಟ್‌ಮ್ಯಾನ್ ನ್ಯೂಸ್ ಜೊತೆ ದೂರವಾಣಿ ಮೂಲಕ ಮಾತನಾಡಿದ ತಹಶೀಲ್ದಾರ್ ಭರತ್ ರಾಜ್, ನಗರ ಹೋಬಳಿಯನ್ನು ಹೊರತುಪಡಿಸಿ ಉಳಿದ ರಿಪ್ಪನ್‌ಪೇಟೆ ಹಾಗೂ ಹೊಸನಗರ ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆ ಇರುವುದರಿಂದ ರಜೆ ಘೋಷಣೆ ಕುರಿತು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ಅವರು ಕೂಡ ಪೋಸ್ಟ್‌ಮ್ಯಾನ್ ನ್ಯೂಸ್‌ಗೆ ಮಾಹಿತಿ ನೀಡಿದ್ದು, ನಗರ ಹೋಬಳಿಯಲ್ಲಿ ಮಾತ್ರ ಭಾರೀ ಮಳೆ ದಾಖಲಾಗುತ್ತಿದೆ. ಉಳಿದ ಭಾಗಗಳಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅವರೊಂದಿಗೆ ನಾಳೆ ಬೆಳಿಗ್ಗೆ 7 ಗಂಟೆಯೊಳಗೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಹೀಗಾಗಿ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳ ರಜೆ ಕುರಿತು ಅಂತಿಮ ಆದೇಶ ನಾಳೆ (ಆಗಸ್ಟ್ 3) ಬೆಳಿಗ್ಗೆ 7 ಗಂಟೆಗೆ ಪ್ರಕಟವಾಗುವ ಸಾಧ್ಯತೆ ಇದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

6 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago