ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!
Sagar police arrested a man accused of shooting and killing a stray dog with an illegal firearm in Nadavalli village of Sagar taluk.
ಆನಂದಪುರ : ತನ್ನ ಸಾಕು ನಾಯಿಗಳೊಂದಿಗೆ ಜಗಳವಾಡಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಬೀದಿ ನಾಯಿಯೊಂದನ್ನು ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಆನಂದಪುರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಾಡವಳ್ಳಿ ಗ್ರಾಮದ ಲಿಂಗಮೂರ್ತಿ ಎಂದು ಗುರುತಿಸಲಾಗಿದೆ.
ಗ್ರಾಮದ ಬೋರೆಪ್ಪ ಎಂಬುವವರು ದನ ಮೇಯಿಸಲು ತೆರಳುತ್ತಿದ್ದಾಗ, ಕಂದು ಬಣ್ಣದ ಗಂಡು ಬೀದಿ ನಾಯಿಯೊಂದು ಅವರನ್ನು ಹಿಂಬಾಲಿಸಿಕೊಂಡು ಹೋಗುತ್ತಿತ್ತು. ಮಾರ್ಗಮಧ್ಯೆ ಲಿಂಗಮೂರ್ತಿ ಮನೆಯ ಬಳಿ ಆತನ ಸಾಕು ನಾಯಿಗಳೊಂದಿಗೆ ಈ ಬೀದಿ ನಾಯಿ ಕಚ್ಚಾಡಿದೆ. ಇದರಿಂದ ತೀವ್ರವಾಗಿ ಕೆರಳಿದ ಲಿಂಗಮೂರ್ತಿ, ಮನೆಯಲ್ಲಿದ್ದ ಅಕ್ರಮ ಬಂದೂಕು ತಂದು ಬೀದಿ ನಾಯಿಯ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಪರಿಣಾಮ, ಗುಂಡೇಟು ತಿಂದ ನಾಯಿ ರಕ್ತದ ಮಡುವಿನಲ್ಲಿ ಒದ್ದಾಡಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಪರವಾನಗಿ ಇಲ್ಲದ ಬಂದೂಕು ಬಳಸಿ ಮೂಕಪ್ರಾಣಿಯನ್ನು ಹತ್ಯೆ ಮಾಡಿದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಆನಂದಪುರ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆರೋಪಿ ಲಿಂಗಮೂರ್ತಿಯನ್ನು ಬಂಧಿಸಿರುವ ಪೊಲೀಸರು, ಆತನ ವಿರುದ್ಧ ಬಿಎನ್ಎಸ್ ಹಾಗೂ ಆರ್ಮ್ಸ್ ಆಕ್ಟ್ (ಶಸ್ತ್ರಾಸ್ತ್ರ ಕಾಯ್ದೆ) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…